ಮಂಡ್ಯ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪುನಶ್ಚೇತನ ತರಭೇತಿ ಕಾರ್ಯಕ್ರಮ..!

Published

on

ಮಳವಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪೋಷಣೆ ಮಾಸ ದಿನಾಚರಣೆ ಅಂಗವಾಗಿ ಪೋಷಣ್ ಅಭಿಯಾನ ಉದ್ಘಾಟನಾ ಸಮಾರಂಭ ಮತ್ತು ಪುನಶ್ಚೇತನ ತರಬೇತಿ ಕಾರ್ಯಕ್ರಮ ಮಳವಳ್ಳಿ ಪಟ್ಟಣದ ಶಾದಿಮಹಲ್ ನಲ್ಲಿ ನಡೆಸಲಾಯಿತು.ಕಾರ್ಯಕ್ರಮವನ್ನು ಸಿಡಿಪಿಓ ಕುಮಾರ ಉದ್ಘಾಟಿಸಿ ಮಾತನಾಡಿ. ಮಕ್ಕಳ ಪೋಷಣೆ ಮಾಡಲು ಅಂಗನವಾಡಿಯಲ್ಲಿ ಅವರಿಗೆ ನೀಡುವ ಆಹಾರ ಪದಾರ್ಥಗಳನ್ನು ಉತ್ವಾದಿಸಿ ಮಕ್ಕಳಿಗೆ ಪೋಷಕಾಂಶ ಹೆಚ್ಚಾಗುವಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಕ್ಕಳ ಪೋಷಣೆ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮಗಳ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಲತಾ, ಕಾರ್ಯದರ್ಶಿ ಶಿವಮ್ಮ, ಎಸಿಡಿಪಿಓ ಮಹೇಶ್, ಮೇಲ್ವಿಚಾರಕಿ ಮಂಜುಳ, ಶೈಲಾಜಾ, ಪಟ್ಟಣ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

ವರದಿ-ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Click to comment

Trending

Exit mobile version