ಮುಳುಬಾಗಿಲು: ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಮುಳುಬಾಗಿಲು ಹೊರವಲಯದ ಆರ್ ಟಿಓ ಕಚೇರಿ ಬಳಿ ನಡೆದಿದೆ. ಆಂಧ್ರ ಮೂಲದ 30 ವರ್ಷದ ಸೈಯದ್ ಝಲಾನಿ ಮೃತ ದುರ್ದೈವಿ. ಮುಳುಬಾಗಿಲಿನಿಂದ ಆಂಧ್ರಗೆ ತೆರಳುವ ವೇಳೆ ಈ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರೀಶಿಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವರದಿ-ವಿ.ರಾಮಕೃಷ್ಣ ಎಕ್ಸ್ ಪ್ರೆಸ್ ಟಿವಿ ಮುಳಬಾಗಿಲು..