Connect with us

ಹುಬ್ಬಳ್ಳಿ-ಧಾರವಾಡ

ಡ್ರಗ್ಸ್ ಜಾಲದಲ್ಲಿ ಯಾರೇ ಇದ್ದರು ಕಠಿಣ ಕ್ರಮ ಕೈಗೊಳ್ಳಬೇಕು: ಸಿದ್ಧರಾಮಯ್ಯ ಆಗ್ರಹ..!

Published

on

ಹುಬ್ಬಳ್ಳಿ: ಡ್ರಗ್ಸ್ ಜಾಲದಲ್ಲಿ ಯಾರೇ ಇದ್ದರು ಕಠಿಣ ಕ್ರಮ ಕೈಗೊಳ್ಳಬೇಕು. ಡ್ರಗ್ಸ್ ಜಾಲದಲ್ಲಿ ದೊಡ್ಡವರು ಸಣ್ಣವರು ಅನ್ನೋದು ಬೇಡ. ಯಾರೇ ರಾಜಕೀಯ ನಾಯಕರು ಇದ್ದರು ಕ್ರಮ ಕೈಗೊಳ್ಳಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಅಹ್ಮದ್ ವಿರುದ್ದ ಸಾಕ್ಷ್ಯ ಇದ್ದರೆ ಗಲ್ಲಿಗೆ ಏರಿಸಲಿ ಅಂತಾ ಹೇಳಿದ್ದಾರೆ. ಅವರು ಆಸ್ತಿಯಲ್ಲಾ ಮುಟ್ಟುಗೋಲು ಹಾಕಿಕೊಳ್ಳಲಿ ಅಂತಾ ಹೇಳಿದ್ದಾರೆ. ಅದನ್ನು ಬಿಟ್ಟು ರಾಜಕೀಯವಾಗಿ ಮುಗಿಸಲು ಆರೋಪ ಮಾಡಬಾರದು ಎಂದರು. ಸಾಕ್ಷ್ಯ ಸಿಕ್ಕರೆ ಕ್ರಮ ಕೈಗೊಳ್ಳಲಿ, ಸಂಬರಗಿ ಹೇಳಿದರು ಅಂತಾ ತನಿಖೆ ಮಾಡೋಕೆ ಆಗುತ್ತಾ. ಸಾಕ್ಷ್ಯ ಇದ್ರೆ ಯಾರನ್ನಾದರೂ ತನಿಖೆ ಮಾಡಲಿ ಎಂದು ಅವರು ಹೇಳಿದರು. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರನಿಗೆ ನೋಟಿಸ್ ಜಾರಿ ವಿಚಾರವಾಗಿ ಮಾತನಾಡಿದ ಅವರು, ಅನಗತ್ಯವಾಗಿ ಸಿಬಿಐ ವಿಚಾರಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇನ್ನೂ ಬರ ಪರಿಹಾರ ಕುರಿತು ಮಾತನಾಡಿ, ಬರ -ನೆರೆ ಪರಿಹಾರ ಇನ್ನೂ ಕೊಟ್ಟಿಲ್ಲ. 25 ಸಂಸದರು ಇದ್ದರು ಪ್ರಯೋಜನವಾಗಿಲ್ಲ ಕಳೆದ ವರ್ಷ ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ. ಆದರೆ ಇದುವರೆಗೂ ಪರಿಹಾರ ನೀಡಿಲ್ಲ. ಮನೆ ಬಿದ್ದವರಿಗೆ ಪರಿಹಾರ ಇನ್ನೂ ಸಿಕ್ಕಿಲ್ಲ ಆನೆ ಹೊಟ್ಟಿಗೆ ಮೂರು ಕಾಸು ಅಲ್ಲ ಆರು ಕಾಸಿನ ಮಜ್ಜಿಗೆ ನೀಡಿದಂತೆ ಪರಿಹಾರ ನೀಡಿದ್ದಾರೆ ಎಂದು ಲೇವಡಿ ಮಾಡಿದರು.ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವೈಪಲ್ಯದ ಬಗ್ಗೆ ಮಾತನಾಡಿ,ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಚರ್ಚೆ ನಡೆಸುತ್ತೇವೆ. ಮೂರು ವಾರಗಳ ಕಾಲ ಅಧಿವೇಶನ ನಡೆಸಲಿ ಅಂತಾ ನಾನು ಸಿಎಂ ಬಿಎಸ್ ವೈ ಗೆ ಪತ್ರ ಬರೆದಿರುವೆ. ನಾಲ್ಕು ಜನರ ವಿರುದ್ದ ಗೋಲಿಬಾರ ಮಾಡಿದ್ದು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅನ್ನೋದು ಸತ್ಯ ಎಂದರು. ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣದಲ್ಲಿ ನವೀನ್ ನನ್ನು ತಕ್ಷಣ ಬಂಧನ ಮಾಡಿದ್ರೆ ಬೆಂಕಿ ಹಚ್ಚುತ್ತಿರಲಿಲ್ಲ. ಬೆಂಕಿ ಹಚ್ಚುವುದು ಕಾನೂನುಬಾಹಿರ ನಾನು ಸಹ ಬೆಂಕಿ ಹಾಕಿರುವುದನ್ನು ಖಂಡಿಸುತ್ತೇನೆ ಎಂದರು. ಸಿಎಂ ಬದಲಾವಣೆ ವಿಚಾರವಾಗಿ ನಾನು ಮಾತನಾಡಲ್ಲ.ಅವರು ಯಾರನ್ನಾದರೂ ಮಾಡಿಕೊಳ್ಳಲಿ. ರಾಜ್ಯವಂತು ದಿವಾಳಿಯಾಗಿದೆ. ಅಲ್ಲದೇ ಸಿಎಂ – ಕುಮಾರಸ್ವಾಮಿ ಎನೂ ಮಾತನಾಡಿಕೊಂಡಿದ್ದಾರೆ ಅಂತಾ ನನಗೆ ಗೊತ್ತಿಲ್ಲ. ಆಸ್ಪತ್ರೆಯಲ್ಲಿದ್ದಾಗ ಒಮ್ಮೆ ಯಡಿಯೂರಪ್ಪನವರ ಜೊತೆಗೆ ಮಾತನಾಡಿದ್ದೆ.ಇಬ್ಬರು ಒಂದೆ ಆಸ್ಪತ್ರೆಯಲ್ಲಿ ಇದ್ದೆವು ಡಿಸ್ಚಾರ್ಜ್ ಆಗುವಾಗ ದೂರವಾಣಿ ಕರೆ ಮಾಡಿದರು ಮಾತನಾಡಿದ್ದೆ ಎಂದ ಅವರು,ಜೆಡಿಎಸ್ ನವರಿಗೆ ಸ್ಪಷ್ಟವಾದ ನಿಲುವಿಲ್ಲ. ಅವರು ಯಾವಾಗ ಬೇಕೋ ಅವಾಗ ಅವರನ್ನ ತಬ್ಬಿಕೊಳ್ಳತಾರೆ ಎಂದು ವ್ಯಂಗ್ಯವಾಡಿದರು.

ವರದಿ- ರಾಜುಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Continue Reading
Click to comment

Leave a Reply

Your email address will not be published. Required fields are marked *

ಹುಬ್ಬಳ್ಳಿ-ಧಾರವಾಡ

ಮದುವೆಗೆ ಹುಡುಗಿ ಸಿಗದೆ ಮನನೊಂದು ಯುವಕ ಆತ್ಮಹತ್ಯೆ..!

Published

on

By

ಮದುವೆಗೆ ಹುಡುಗಿ ಸಿಗದ ಹಿನ್ನೆಲೆ 34 ವರ್ಷದ ಪ್ರವೀಣ್ ಎಂಬ ಯುವಕ ಮನನೊಂದು ನೇಣಿಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕಿನ ಕಪ್ಪಸೋಗೆ ಗ್ರಾಮದಲ್ಲಿ ನಡೆದಿದೆ. ಆರೇಳು ವರ್ಷಗಳಿಂದ ಹುಡುಗಿ ಹುಡುಕುತ್ತಿದ್ದರೂ ಮದುವೆಗೆ ಹೆಣ್ಣು ಸಿಗದ ಹಿನ್ನೆಲೆ ಮಾನಸಿಕ ಖಿನ್ನತೆಗೆ ಒಳಗಾಗಿ ಮನೆಯಲ್ಲಿ ಪ್ರವೀಣ್ ನೇಣಿಗೆ ಶರಣಾಗಿದ್ದಾನೆ. ಸಂಬಂಧಿಕರಿರುವ ಎಲ್ಲಾ ಕಡೆ ಹೆಣ್ಣಿಗಾಗಿ ಹುಡುಕಾಟ ನಡೆಸಲಾಗಿತ್ತು. ಪ್ರವೀಣ್ ಕೃಷಿಕನಾದ ಕಾರಣ ಹೆಣ್ಣು ನೀಡಲು ನಿರಾಕರಿಸಲಾಗುತ್ತಿತ್ತು ಎಂದು ಮೃತನ ಸಹೋದರ ಪರಮೇಶ್ ನೋವನ್ನು ವ್ಯಕ್ತಪಡಿಸಿದ್ದಾನೆ.ಇನ್ನೂ ಮುಂದೆ ಯಾರೂ ಕೂಡ ಹುಡುಗ ಕೃಷಿಕ ಎಂದು ಕಡೆಗಣಿಸಬೇಡಿ ಎಂದು ಹೆಣ್ಣು ಹೆತ್ತವರಿಗೆ ಪ್ರವೀಣ್ ಸಹೋದರ ಪರಮೇಶ್ ಮನವಿ ಮಾಡಿದ್ದಾರೆ.ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ನಂಜನಗೂಡು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.

ವರದಿ- ಹುಲ್ಲಹಳ್ಳಿ ಮೋಹನ್ ಎಕ್ಸ್ ಪ್ರೆಸ್ ಟಿವಿ ನಂಜನಗೂಡು

Continue Reading

ಹುಬ್ಬಳ್ಳಿ-ಧಾರವಾಡ

ಪಿಡಿಓಗಳನ್ನು ಕಂಟ್ರೋಲ್ ಇಡಿ, ಬಡವರಿಗೆ ಮೊದಲ ಆದ್ಯತೆ- ವಿ.ಸೋಮಣ್ಣ..!

Published

on

By

ಹುಬ್ಬಳ್ಳಿ: ಜಗದೀಶ್ ನಗರ ಆಶ್ರಯ ಬಡಾವಣೆಯಲ್ಲಿ ಬಾಕಿ ಉಳಿದ 188 ಆಶ್ರಯ ಮನೆಗಳನ್ನು ಮೂಲ ಫಲಾನುಭವಿಗಳಿಗೆ ಹಸ್ತಾಂತರ ಮಾಡಬೇಕು ಎಂದು ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಜಗದೀಶ್ ನಗರ ಆಶ್ರಯ ನಿವಾಸಿಗಳ ಹಿತರಕ್ಷಣಾ ಸಮತಿ ವತಿಯಿಂದ ಮನವಿ ಸಲ್ಲಿಸಿದರು. ನಂತರ ಮಾತನಾಡಿದ ವಸತಿ ಸಚಿವ ವಿ.ಸೋಮಣ್ಣ ಬಡವರ ಶೋಷಣೆ ನಿಂತಿಲ್ಲ, ನಾಳೆ ಬರ್ತೀನಿ, ಆಯುಕ್ತರ ಕರಿಸ್ತೀನಿ, ನನ್ನ ಜೊತೆ ಎಂಟು ದಿನ ಬಾ, ನೀನೇ ಮಂತ್ರಿಗಿರಿ ಮಾಡು, ಮೂರುವರೆ ಲಕ್ಷದಲ್ಲಿಯೂ ದುಡ್ಡು ಹೊಡಿಯುತಿದ್ದಾರೆ, ಎಂದು ಹೋರಾಟಗಾರನಿಗೆ ಹೇಳಿದರು. ಇನ್ನೂ ಆತ್ಮವಂಚನೆ ಮಾಡಿಕೊಳ್ಳಬೇಡಿ ಬಡವರ ಪರ ಇರಿ ಶಾಸಕ ಅರವಿಂದ ಬೆಲ್ಲದ್ ಒಳ್ಳೆವರು ಇದ್ದಾರೆ ಸ್ವಲ್ಪ ಹೈಫೈ ಇದ್ದಾರೆ. ಈಗ ಮೊದಲ ಕಾನೂನು ಹೋಯ್ತು, ಮೋಸ ವಂಚನೆ ಈಗ ನಡೆಯಲ್ಲ. 2021 ರಲ್ಲಿ ಅಲೌಟ್ ಆದ ಮನೆಗಳಿಗೆ, ಹಸ್ತಾಂತರ ಮಾಡಿಲ್ಲ ಇನ್ನೂ ಹತ್ತು ಹದಿನೈದು ದಿನಗಳಲ್ಲಿ ಇಷ್ಟು ವರ್ಷದ ಸಮಸ್ಯೆ ಪರಿಹರಿಸುತ್ತೇನೆ. ಒಬ್ಬೊಬ್ಬರು ಒಂದೊಂದೇ ಮನೆ ಪಡೆಯಿರಿ. ಎಂತಹದ್ದೇ ಸಮಸ್ಯೆ ಇದ್ದರೂ ನಾನು ಪರಿಹರಿಸ್ತೀನಿ. ಪಿಡಿಓಗಳನ್ನು ಕಂಟ್ರೋಲ್ ಇಡಿ ದೇಶದಲ್ಲಿ ಪಿಡಿಒ ಪಂಚಾಯತಿ ನಡೆಸುವಲ್ಲಿ ಸುಮಾರು ಒಂದು ಕೋಟಿ ಪಂಚಾಯ್ತಿ ಬರುತ್ತದೆ. ಸತ್ಯ ಇಲ್ಲದೆ ನಾ ಏನು ಮಾತನಾಡುವುದಿಲ್ಲ. ಬಡವರಿಗೆ ಮೊದಲ ಆದ್ಯತೆ ನೀಡಿ, ಇದು ಸಮಸ್ಯೆ ಅಲ್ಲ, ಇದು ಅವಶ್ಯಕತೆ ಎಂದರು.

ವರದಿ-ಶಂಕರ್ ನಾಗ್ ಎಕ್ಸ್ ಪ್ರೆಸ್ ಟಿವಿಹುಬ್ಬಳ್ಳಿ

Continue Reading

ಹುಬ್ಬಳ್ಳಿ-ಧಾರವಾಡ

ಬೆಳಗಾವಿ ವಿಭಾಗ ಮಟ್ಟದ ಸಂಕಲ್ಪ ಸಮಾವೇಶಕ್ಕೆ ಚಾಲನೆ-ಡಿಕೆ ಶಿವಕುಮಾರ್..!

Published

on

By

ಹುಬ್ಬಳ್ಳಿ: ಈಗಾಗಲೇ ಬೆಂಗಳೂರು, ಮೈಸೂರು ವಿಭಾಗದ ಸಮಾವೇಶ ಯಶಸ್ವಿಯಾಗಿ ನಡೆದಿದೆ. ಬೆಳಗಾವಿ ವಿಭಾಗದ ಸಮಾವೇಶ ಹುಬ್ಬಳ್ಳಿಯ ನಡೆಯುತ್ತಿದೆ. ನಾವು ಸಂಕಲ್ಪ ಮಾಡಲು ಇಲ್ಲಿಸೇರಿದ್ದೇವೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ ಹೇಳಿದರು. ನಗರದಲ್ಲಿಂದು ಬೆಳಗಾವಿ ವಿಭಾಗ ಮಟ್ಟದ ಸಂಕಲ್ಪ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು 2021 ಹೋರಾಟದ ವರ್ಷ. ಸಂಘರ್ಷದ ವರ್ಷ ಎಂದು ಘೋಷಣೆ ಮಾಡಿದ್ದೇವೆ. ರಾಷ್ಟ್ರ, ರಾಜ್ಯದಲ್ಲಿ ಏನು ನಡೆಯುತ್ತಿದೆ ಅನ್ನೋದು ನಿಮಗೆಲ್ಲ ಗೊತ್ತಿದೆ. ಕಾಂಗ್ರೆಸ್ ಮಾಸ್ ಗ್ರೇಡ್ ಪಕ್ಷವಾಗಿದೆ. ಇದೀಗ ಕೆಡರ್ ಗ್ರೇಡ್ ಪಕ್ಷ ಮಾಡಬೇಕಾಗಿದೆ. ಕಾರ್ಯಕರ್ತರು ಜವಾಬ್ದಾರಿಗಳನ್ನು ಹೇಗೆ ನೀಡಬೇಕು, ಅವರು ಹೇಗೆ ಕೆಲಸ ಮಾಡಬೇಕು ಅನ್ನೋದರ ಬಗ್ಗೆ ಚರ್ಚೆ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ಹೋರಾಟ ಮಾಡಿಕೊಂಡು ಬಂದಿರುವ ಪಕ್ಷ. ಪಕ್ಷದ ಇತಿಹಾಸವನ್ನು ಯಾರು ಬದಲಾಯಿಸಲು ಸಾಧ್ಯವಿಲ್ಲ ಎಂದರು. ಕಾಂಗ್ರೆಸ್ ಪಕ್ಷದ ಗುರಿಯನ್ನು ಮರೆತರೆ ಸೋಲು ಕಟ್ಟಿಟ್ಟ ಬುತ್ತಿ ಅಂತಾ ನೆಹರು ಅವರು ಹೇಳಿದ್ದರು. ನಾಯಕರು ತಯಾರಿ ಆಗಬೇಕಿದೆ.ಅದನ್ನು ನಾವು ಮಾಡುತ್ತಿದ್ದೇವೆ. ಇಲ್ಲಿ ಬಂದಿರುವ ನೀವೆಲ್ಲ ಕಾರ್ಯಕರ್ತರಲ್ಲ, ಎಲ್ಲರೂ ನಾಯಕರೇ. ಅವಕಾಶಗಳನ್ನು ಸೃಷ್ಟಿಸಿಕೊಂಡರೆ ಮಾತ್ರ ನೀವು ನಾಯಕರು ಆಗಲು ಸಾಧ್ಯ. ನಿಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಇಲ್ಲಿ ವೇದಿಕೆ ಕೊಡುತ್ತೇವೆ. ನಿಮ್ಮ ಕೆಲಸಗಳ ಬಗ್ಗೆ ನಾವು ಈಗಾಗಲೇ ವರದಿ ಮಾಡಿದ್ದೇವೆ ಎಂದರು. ಇನ್ನೂ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್,ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ, ಸಲೀಂ ಅಹ್ಮದ್, ಮಾಜಿ ಸಚಿವ ಎಂ.ಬಿ ಪಾಟೀಲ್, ಆರ್.ವಿ ದೇಶಪಾಂಡೆ, ರಾಮಲಿಂಗಪ್ಪ ರೆಡ್ಡಿ, ಕೆ.ಬಿ ಕೋಳಿವಾಡ, ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಕುಸುಮಾ ಶಿವಳ್ಳಿ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ. ಮುಂಬರುವ ತಾಲೂಕು, ಜಿಲ್ಲಾ ಪಂಚಾಯತ ಚುನಾವಣೆಗೆ ಪಕ್ಷ ಸಂಘಟನೆಗಾಗಿ ಸಮಾವೇಶ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗ ಮಟ್ಟದ ನಾಯಕರು ಹಾಗೂ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿದ್ದರು.

ವರದಿ-ರಾಜುಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişbakırköy escortkareasbetbetingo güncel girişdizimatFındıkzade EscortBitcoin Kabul Eden Bahis Sitelerigüvenilir casino sitelerigobahis girişasper casino girişesbet girişbullbahis girişbenimbahis girişbenimbahisGüvenilir poker siteleriSüper Ligizmir escortBakırköy Escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortistanbul escort30 TL Bonus Veren Bahis Siteleri betmatikmariobetonwinbetistsüpertotobetgrandpashabet telegramBetist Girişbullbahisbullbahisen iyi slot sitelerixslot giriş adresitipobet365ilk yatırım bonusu veren sitelerizmir travestiPHP Shell indirbetturkeybetturkeybetparkstarzbetjojobetbetparkbetistmarsbahismarsbahis girişdeneme bonusu veren sitelerdeneme bonusu veren sitelerBahis Siteleribetturkeybetturkeybetturkey girişbetturkeystarzbet