ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ನಿರೂಪಕ ಸೇರಿದಂತೆ ಮೂವರಿಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿ, ಸಂಜನಾ ಜೈಲಿಗೆ ಸೇರಿದ ಬೆನ್ನಲ್ಲೇ ಇದೀಗ ಕಿರುತರೆ ನಿರೂಪಕ ಅಕುಲ್ ಬಾಲಾಜಿಗೆ ನಾಳೆ ಬೆಳಗ್ಗೆ ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಇನ್ನು ಪ್ರಕರಣದಲ್ಲಿ ರಾಜಕಾರಣಿ ಆರ್.ವಿ ದೇವರಾಜ್ ಪುತ್ರ ಆರ್.ವಿ ಯುವರಾಜ್ಗೂ ಸಿಸಿಬಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ. ಇನ್ನು 2010 ರಲ್ಲಿ ತೆರೆಕಂಡ ‘ನೂರು ಜನ್ಮಕೂ’ ಸಿನಿಮಾದ ನಟ ಸಂತೋಷ್ ಕುಮಾರ್ಗೂ ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಹಾರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ವರದಿ- ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು