ಕೋಲಾರ: ಆಂಧ್ರದಿಂದ ಬೆಂಗಳೂರಿಗೆ ಇನೋವಾ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ರಾಯಚೂಟಿ ನಿವಾಸಿ ಷೇಕ್ ಖಾಸೀಂಪಾಷ್ ನನ್ನು ಕೋಲಾರ ಪೋಲಿಸರು ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಕ್ರಾಸ್ ಬಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 13 ಲಕ್ಷದ 27 ಕೆ.ಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಸೈಬರ್, ಆರ್ಥಿಕ ಮತ್ತು ಮಾದಕದ್ರವ್ಯ ನಿಯಂತ್ರಣ ಹಾಗೂ ಅಪರಾಧ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಇನ್ನು ಸಿಇಎನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಕೋಲಾರದ ಎಸ್ಪಿ ಕಾರ್ತಿಕ್ ರೆಡ್ಡಿ ಕಾರ್ಯಚರಣೆ ನಡೆಸಿದ ಪೋಲಿಸರಿಗೆ ಅಭಿನಂದಿಸಿದ್ದಾರೆ.
ವರದಿ-ಬೆಟ್ಟಪ್ಪ ಎಕ್ಸ್ ಪ್ರೆಸ್ ಟಿವಿ ಕೋಲಾರ