ತಿಪಟೂರು

ತಿಪಟೂರು ಎಪಿಎಂಸಿಯ ಅಧ್ಯಕ್ಷ- ಉಪಾಧ್ಯಕ್ಷ ಅವಿರೋಧ ಆಯ್ಕೆ..!

Published

on

ತಿಪಟೂರು: ಏಷ್ಯಾದಲ್ಲಿಯೇ ಅತಿ ದೊಡ್ಡ ಕೊಬ್ಬರಿ ಮಾರುಕಟ್ಟೆಯಾದ ತಿಪಟೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಅಧ್ಯಕ್ಷರಾಗಿ ಎಚ್ ಬಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ತರಕಾರಿ ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನೂತನ ಅಧ್ಯಕ್ಷ ರಾಗಿ ಆಯ್ಕೆಯಾದ ಎಚ್ ಬಿ ದಿವಾಕರ ಮಾತನಾಡಿ ಈ ಕೃಷಿ ಉತ್ಪನ್ನ ಮಾರುಕಟ್ಟೆ ಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ.ರೈತರಿಗೋಸ್ಕರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಭಿವೃದ್ಧಿಗೆ ಶ್ರಮವಹಿಸುತ್ತೇನೆ. ನೆನೆಗುದಿಗೆ ಬಿದ್ದಿರುವ ಕಿಬ್ಬನಹಳ್ಳಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ ಅಭಿವೃದ್ಧಿಪಡಿಸುವುದು ಹಾಗೂ ಕೊನೆಹಳ್ಳಿಯಲ್ಲಿ ತೆಂಗು ಸಂಸ್ಕರಣಾ ಘಟಕ ಮತ್ತು ಟೆಕ್ನಾಲಜಿ ಪಾರ್ಕ್ ಹಾಗೂ ಕೊಪ್ಪ ಗ್ರಾಮದ ಬಳಿ ಶೀತಲೀಕರಣ ಘಟಕಸ್ಥಾಪಿಸಲು ಶ್ರಮಿಸುವುದಾಗಿ ಎಚ್ ಬಿ ದಿವಾಕರ ತಿಳಿಸಿದರು.ಶಾಸಕ ಬಿಸಿ ನಾಗೇಶ್, ಬಿಜೆಪಿ ಮುಖಂಡ ಲೋಕೇಶ್ವರ, ಜೆಡಿಎಸ್ ಕಾರ್ಯಾಧ್ಯಕ್ಷ ಶಿವಸ್ವಾಮಿ, ಎಪಿಎಂಸಿ ನಿರ್ದೇಶಕರುಗಳು, ಚುನಾವಣಾಧಿಕಾರಿಯಾಗಿ ತಹಸಿಲ್ದಾರ್ ಚಂದ್ರಶೇಖರ್, ಎಪಿಎ೦ಸಿ ಕಾರ್ಯದರ್ಶಿ ಸಿದ್ದು ನ್ಯಾಮಗೌಡ, ಉಪಕಾರ್ಯದರ್ಶಿ ಹೊನ್ನೂರ್ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ವರದಿ- ಸಿದ್ದೇಶ್ವರ ಸಿಎನ್ ಎಕ್ಸ್ ಪ್ರೆಸ್ ಟಿವಿ ತಿಪಟೂರು.

Click to comment

Trending

Exit mobile version