Uncategorized

ಬಿಜೆಪಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ..!

Published

on

ಶಹಾಪುರ : ತಾಲೂಕಿನ ಸಗರ ಗ್ರಾಮದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ತೊರೆದು ನೂರಾರು ಕಾರ್ಯಕರ್ತರು ಮುಖಂಡರಾದ ಅಮೀನ್ ರೆಡ್ಡಿ ಅವರ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು. ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ ಆದ್ದರಿಂದ ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಜನ ವಾಲುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಮತದಾರರು ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅಮೀನರೆಡ್ಡಿ ಪಾಟೀಲ್ ಯಾಳಗಿ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಶರಣಪ್ಪ ಜಾಯಿ, ಗುರಣ್ಣ ಕೂಡ್ಲೂರು, ಹಣಮಂತ್ರಾಯ ಕೂಡ್ಲೂರು, ಶರಣಪ್ಪ ಕೂಡ್ಲೂರು, ಮಲ್ಕಪ್ಪ ಕೂಡ್ಲೂರು ಹಾಗೂ ಇತರರು ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು.

ವರದಿ-ಬಸವರಾಜ್ ಸಿನ್ನೂರ ಎಕ್ಸ್ ಪ್ರೆಸ್ ಟಿವಿ ಶಹಾಪುರ

Click to comment

Trending

Exit mobile version