ಆನೇಕಲ್ : ಒಂಟಿ ಮಹಿಳೆ ಕೊಲೆ ಮಾಡಿ ಮನೆ ದೋಚಿದ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಕಳೆದ ವಾರ ಆನೇಕಲ್ ತಾಲೂಕಿನ ಸಿಂಗೇನ ಅಗ್ರಹಾರ ಬಳಿ ಮನೆಯಲ್ಲಿದ್ದ ಮಹಿಳೆಯನ್ನ ಕೊಲೆ ಮಾಡಿ, ಮನೆಯಲ್ಲಿ ದರೋಡೆ ನಡೆಸಿ ಆರೋಪಿಗಳು ಪರಾರಿಯಾಗಿದ್ದರು. ಆದರೆ ಮುತ್ಯಾಲಮಡುವಿನಲ್ಲಿ ಆರೋಪಿಗಳು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿ ವೇಲು, ಬಾಲಕೃಷ್ಣ ಬಂಧಿಸಲು ಹೆಬ್ಬಗೋಡಿ ಇನ್ಸ್ಪೆಕ್ಟರ್ ಗೌತಮ್ ಹಾಗು ಬನ್ನೇರುಘಟ್ಟ ಪೊಲೀಸ್ ಎಸ್.ಐ ಗೋವಿಂದರಾಜು ತೆರಳಿದ್ದರು. ಈ ವೇಳೆ ಏಕಾಏಕಿ ಹೆಬ್ಬಗೋಡಿ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಫೈರಿಂಗ್ ಮಾಡಿದ್ದಾರೆ.
ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು