ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆಯುತ್ತಿದ್ರೆ, ಇತ್ತ ಫೀಲ್ಡ್ಗೆ ಇಳಿದ ಐಎಸ್ಡಿ ಅಧಿಕಾರಿಗಳು ಭೇಟೆ ಆರಂಭಿಸಿದ್ದು, ಇದೀಗ ಮಾಜಿ ಸಂಸದನ ಪುತ್ರನಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಮಂಡ್ಯ ಕ್ಷೇತ್ರದ ಮಾಜಿ ಸಂಸದ ಶಿವರಾಮೇಗೌಡ ಪುತ್ರ ಚೇತನ್ ಗೌಡಗೆ ಇಂದು ಶಾಂತಿ ನಗರದಲ್ಲಿರುವ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸುವಂತೆ ಐಎಸ್ಡಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.ಈಗಾಗಲೇ ಕೇರಳ ಮೂಲದ ಇಬ್ಬರ ಐಎಸ್ಡಿ ಅಧಿಕಾರಿಗಳು ಬಂಧಿಸಲಾಗಿದ್ದು, ಅವರ ಹೇಳಿಕೆ ಆಧಾರದ ಮೇಲೆ ನೋಟಿಸ್ ಜಾರಿ ಮಾಡಲಾಗಿದೆ ಎನ್ನಲಾಗಿದೆ.
ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು