ದಕ್ಷಿಣ ಕನ್ನಡ : ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಇದೀಗ ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ.ಇತ್ತೀಚೆಗೆ ಡ್ರಗ್ಸ್ ಸಾಗಿಸುತ್ತಿದ್ಸ ದಕ್ಷಿಣ ಕನ್ನಡ ಮೂಲದ ಬಾಲಿವುಡ್ ನಟ ಕಿಶೋರ್ ಶೆಟ್ಟಿಯನ್ನ ಸಿಸಿಬಿ ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಲಾಗಿತ್ತು. ಇದೀಗ ಕಿಶೋರ್ ಶೆಟ್ಟಿ ಹೇಳಿಕೆ ಆಧಾರದ ಮೇಲೆ ಅನುಶ್ರೀಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಸಿಸಿಬಿ ನೋಟಿಸ್ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅನುಶ್ರೀ, ನನಗೆ ಯಾವುದೇ ನೋಟಿಸ್ ಬಂದಿಲ್ಲ, ನೋಟಿಸ್ ಬಂದಿದ್ದರೆ ನಾನೇ ಹೇಳುತ್ತಿದ್ದೆ ಎಂದಿದ್ದಾರೆ.
ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು