ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಬಲಿಯಾದವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಬಸವಕಲ್ಯಾಣ ಕ್ಷೇತ್ರದ ಶಾಸಕ ನಾರಾಯಣ ರಾವ್ ನಿಧನರಾಗಿದ್ದಾರೆ. ಆಗಸ್ಟ್ 31 ರಂದು ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.ನಿನ್ನೆ ರಾತ್ರಿ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ 3.55 ನಿಮಿಷಕ್ಕೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು