ಬೆಂಗಳೂರು: ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಯುವಕನೋರ್ವನನ್ನು ಅಪಹರಿಸಿ 30 ಲಕ್ಷ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಬೆಂಗಳೂರಿನ ವಿದ್ಯಾರಣ್ಯಪುರಂ ನಿವಾಸಿಗಳಾಗಿದ್ದ ಮಹೇಶ್, ಮೋಹನ್, ನವ್ಯಂತ್, ಭರತ್, ಜೋಸೆಪ್, ರವಿಕಿರಣ್ ಹಾಗೂ ರಾಜು ಎಂಬಾ 7 ಜನ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಗಮಂಗಲ ಪಟ್ಟಣದ ಎಸ್.ಎಲ್.ಎನ್. ಗ್ರ್ಯಾಂಡ್ ರೆಸಿಡೆನ್ಸಿಯಲ್ಲಿ ಆರೋಪಿಗಳು ತಲೆ ಮರೆಸಿಕೊಂಡಿದ್ದರೆಂಬಾ ಖಚಿತ ಮಾಹಿತಿ ಆಧಾರದ ಮೇರೆಗೆ ನಾಗಮಂಗಲ ಪಟ್ಟಣ ಪೋಲಿಸರು ದಿಢೀರ್ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಬಂಧಿತ ಆರೋಪಿಗಳನ್ನು ಬೆಂಗಳೂರಿನ ತಿಲಕ್ ನಗರ ಪೊಲೀಸರಿಗೆ ಒಪ್ಪಿಸಿದ್ದು, ನಾಗಮಂಗಲ ಪಟ್ಟಣ ಠಾಣೆಯ ಪಿಎಸ್ಐ ರವಿಕಿರಣ್ ನೇತೃತ್ವದ ಮಿಂಚಿನ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗಿದೆ.
ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು