ಸಿಂಧನೂರು

ಸ್ವಯಂ ಪ್ರೇರಿತವಾಗಿ ವ್ಯಾಪಾರ ವಹಿವಾಟು ಬಂದ್ ಮಾಡಿ ಬಂದ್ ಗೆ ಸಂಪೂರ್ಣ ಬೆಂಬಲ..!

Published

on

ಸಿಂಧನೂರು: ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ, ಕೃಷಿ ಮಸೂದೆ,ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ ಸೇರಿದಂತೆ ಇತರೆ ಕಾಯ್ದೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಹೊರಟಿರುವುದು ಹಿಂಪಡೆಯಬೇಕೆಂದು ಒತ್ತಾಯಿಸಿ ರೈತಪರ ದಲಿತಪರ, ಕಾರ್ಮಿಕಪರ, ಕನ್ನಡಪರ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಕರೆ ನೀಡಿದ್ದ ಸಿಂಧನೂರು ಬಂದ್ ಗೆ ತಾಲ್ಲೂಕಿನಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು. ಬೆಳ್ಳಂಬೆಳಗ್ಗೆ ಬಂದ್ ಗೆ ಕರೆ ನೀಡಿದ ಸಂಘಟನೆಗಳು ನಗರಾದ್ಯಂತ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಮ್ಮ ವ್ಯಾಪಾರ ವಹಿವಾಟುಗಳನ್ನು ಒಂದು ದಿನದ ಮಟ್ಟಿಗೆ ಬಂದ್ ಮಾಡುವುದರ ಮೂಲಕ ಈ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಮನವಿ ಮಾಡುತ್ತಿರುವುದು ಕಂಡು ಬಂದಿದೆ.ಹೋಟೆಲ್ ಬಾರ್ ಬೀದಿ ವ್ಯಾಪಾರಿಗಳು .ಆಟೋಗಳು ಟ್ಯಾಕ್ಸಿಗಳು .ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡುವುದರ ಮೂಲಕ ಕರೆ ನೀಡಿದ ಬಂದ್ ಗೆ ಬೆಂಬಲ ಸೂಚಿಸಿದರು.ಜೊತೆಗೆ ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಪಕ್ಷದ ಮುಖಂಡರು ಈ ಹೋರಾಟಕ್ಕೆ ಕೈ ಜೋಡಿಸಿದ್ದರು.

ವರದಿ-ಸೈಯದ್ ಬಂದೇನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು

Click to comment

Trending

Exit mobile version