ಹುಬ್ಬಳ್ಳಿ: ರೈತ ವಿರೋಧಿ ಮಸೂದೆಯನ್ನು ಜಾರಿಗೆ ತರಲು ಹೊರಟಿದ್ದು ರೈತರಿಗೆ ಕೇಂದ್ರ ಸರಕಾರ ಅನ್ಯಾಯ ಮಾಡಿತ್ತಿದ್ದೆ, ಆದ್ದರಿಂದ ಕೂಡಲೆ ಕೇಂದ್ರ ಸರಕಾರ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ರೈತ ಮಹಿಳೆ ಮಂಜುಳಾ ಹೇಳಿದರು.ನಗರದ ಚನ್ನಮ್ಮ ವೃತ್ತದಲ್ಲಿ ಕರ್ನಾಟಕ ಬಂದ್ ಕುರಿತು ಮಾತನಾಡಿದ ಅವರು ಇವತ್ತಿನ ಹೋರಟಕ್ಕೆ ಕರ್ನಾಟಕದ ಜನತೆ ಉತ್ತಮ ಸ್ಪಂದಿಸುವ ಮೂಲಕ ರೈತರ ಪರ ನಿಂತ್ತಿದ್ದಾರೆ, ಕೇಂದ್ರ ಹಾಗೂ ರಾಜ್ಯ ಸರಕಾರ ಈಗಲಾದರೂ ಎಚ್ಚೆತ್ತಕೊಂಡ ರೈತ ವಿರೋಧಿ ತಿದ್ದುಪಡಿ ಹಿಂಪಡೆಯಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ರೈತರ ಜೊತೆ ಚರ್ಚೆ ಮಾಡಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ವರದಿ- ರಾಜುಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ