Uncategorized

ಯುಪಿ ಸರ್ಕಾರ ವಜಾಗೊಳಿಸುವಂತೆ ಬಿಎಸ್ಪಿ ಒತ್ತಾಯಿಸಿ ಪ್ರತಿಭಟನೆ.!

Published

on

ನಾಗಮಂಗಲ: ಉತ್ತರ ಪ್ರದೇಶದಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈಯ್ದ ಪ್ರಕರಣ, ನಾಗರೀಕ ಸಮಾಜವೇ ತಲೆ ತಗ್ಗಿಸುವಂತಾಗಿದ್ದು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾದ ಸಿಎಂ ಯೋಗಿ ಆದಿತ್ಯನಾಥ್ ಬಿಜೆಪಿ ಸರ್ಕಾರವನ್ನ ಕೂಡಲೇ ವಜಾಮಾಡಿ ರಾಷ್ಟ್ರಪತಿ ಆಡಳಿತ ಜಾರಿಯಾಗಬೇಕು ಎಂದು ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ನಾಗಮಂಗಲದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಮಂಗಲ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಬಿಜೆಪಿ ಸರ್ಕಾರದ ವಿರುದ್ದ ಘೋಷಣೆ ಕೂಗಿದ ಕಾರ್ಯಕರ್ತರು ಮಿನಿವಿನಸೌಧಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಬಿಎಸ್ ಪಿ ಮಂಡ್ಯ ಜಿಲ್ಲಾ ಸಂಚಾಲಕ ಕೆ.ಹೆಚ್. ಮಹದೇವ್, ಉತ್ತರ ಪ್ರದೇಶ ರಾಜ್ಯದಲ್ಲಿ ನಿತ್ಯವೂ ಕೊಲೆ ಸುಲಿಗೆ ಅತ್ಯಾಚಾರ ಪ್ರಕರಣ ನಡೆಯುತ್ತಿವೆ ಮನಿಷಾ ಯುವತಿಯ ಅತ್ಯಾಚಾರ ಪ್ರಕರಣ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಯೋಗಿ ಸರ್ಕಾರ ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿದೆ. ಕೂಡಲೇ ಆ ರಾಜ್ಯದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು. ನಾಗಮಂಗಲ ತಾಲ್ಲೂಕು ಬಿಎಸ್ ಪಿ ಅದ್ಯಕ್ಷ ಮುಳುಕಟ್ಟೆ ಚಂದ್ರು ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ದಲಿತರಿಗೆ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲವಾಗಿದೆ. ಮಹಿಳೆಯರ ಮೇಲಿನ ಅತ್ಯಾಚಾರಗಳು ಹೆಚ್ಚಾಗುತ್ತಿವೆ. ಬಿಜೆಪಿ ಸರ್ಕಾರ ಪ್ರಜಾ ಪ್ರಭುತ್ವ ವಿರೋದಿಯಾಗಿದ್ದು ಕೂಡಲೆ ಸರ್ಕಾರ ವಜಾ ಮಾಡಬೇಕು ಎಂದು ರಾಷ್ಟ್ರಪತಿಗಳಿಗೆ ಒತ್ತಾಯಿಸುತ್ತೆ ಎಂದರು.ತಹಶೀಲ್ದಾರ್ ಕುಂಞ ಅಹಮ್ಮದ್ ಪ್ರತಿಭಟನಾಕಾರಿಂದ ಮನವಿ ಪತ್ರ ಸ್ವಿಕರಿಸಿದರು ಈ ವೇಳೆ ಬಿಎಸ್ ಪಿ ಮುಖಂಡರಾದ ಲೋಕೇಶ್, ವಿಜಿಕುಮಾರ್, ವರದರಾಜ್, ರಮೇಶ್, ಉಮೇಶ್,ಆರಣಿ ಸುರೇಶ್ ಹಾಗೂ ಸ್ವಾಮಿ ಸೇರಿದಂತೆ ಮುಂತಾದವರು ಇದ್ದರು.

ವರದಿ-ಎಸ್.ವೆಂಕಟೇಶ್ ಎಕ್ಸ್ ಪ್ರೆಸ್ ಟಿವಿ ನಾಗಮಂಗಲ.

Click to comment

Trending

Exit mobile version