Connect with us

Uncategorized

ಮೋದಿ ಸರ್ಕಾರ ಕಾಂಗ್ರೆಸ್ ಪಕ್ಷವನ್ನು ಕುಗ್ಗಿಸುವ ಕೆಲಸ ಮಾಡ್ತಾಯಿದೆ,ನಮ್ಮ ಪಕ್ಷ ಇಂತಹ ದಾಳಿಗೆ ಜಗ್ಗುವುದಿಲ್ಲ- ಪಿ.ಎಂ.ನರೇಂದ್ರಸ್ವಾಮಿ..!

Published

on

ಮಳವಳ್ಳಿ: ಕೇಂದ್ರದ ಮೋದಿ ಸರ್ಕಾರ ಕಾಂಗ್ರೆಸ್ ಪಕ್ಷ ಹಾಗೂ ಡಿ.ಕೆ.ಶಿವಕುಮಾರ ಅವರ ಬೆಳವಣಿಗೆ ಸಹಿಸಲಾಗದೆ ಸಿಬಿಐ ಮೂಲಕ ಶಕ್ತಿ ಕುಗ್ಗಿಸುವ ಕೆಲಸ ಮಾಡುತ್ತಿದೆ. ಆದರೆ ಇಂತಹ ಯಾವುದೇ ದಾಳಿಗೆ ಪಕ್ಷ ಮತ್ತು ಅವರು ಜಗ್ಗುವುದಿಲ್ಲ ಎಂದು ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ತಾಲ್ಲೂಕು ಪಂಚಾಯಿತಿಯ ನೂತನ ಅಧ್ಯಕ್ಷ ಪುಟ್ಟಸ್ವಾಮಿ ಅವರನ್ನು ಅಭಿನಂದಿಸಿ ಅವರು ಸುದ್ದಿಗೋಷ್ಠಿ ನಡೆಸಿದರು. ಸದ್ಯ ರಾಜ್ಯದ ಎರಡು ಕಡೆ ಉಪಚುನಾವಣೆ ನಡೆಯುತ್ತಿದ್ದು,ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪ್ರಚಾರ, ಅವರ ಕಾರ್ಯತಂತ್ರ ನೋಡಿ ಬಿಜೆಪಿ ಇಂತಹ ಕೆಲಸಕ್ಕೆ ಕೈ ಹಾಕಿದೆ.ಆದರೆ ಬಿಜೆಪಿ ನೇರ ಹೋರಾಟ ಮಾಡದೆ ಇಂತಹ ಹೀನ ಕೆಲಸಕ್ಕೆ ಕೈ ಹಾಕಿರುವುದು ದುರದೃಷ್ಟಕರ. ಬಿಜೆಪಿಯು ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಮತ್ತು ಸಿಬಿಐಯನ್ನು ಬಳಿಸಿಕೊಂಡು ಪಿತೂರಿ ನಡೆಸುತ್ತಿದ್ದು, ಇಂತಹ ಗೊಡ್ಡು ಬೆದರಿಕೆಗೆ ಡಿ.ಕೆ.ಶಿವಕುಮಾರ್ ಅವರು ಹಾಗೂ ಕಾಂಗ್ರೆಸ್ ಪಕ್ಷ ಎದುರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.ಇದೇ ತಿಂಗಳು 10ರಂದು ಮಂಡ್ಯದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ರೈತ ಸಮಾವೇಶವನ್ನು ಹಮ್ಮಿಕೊಂಡಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ತಂದಿರುವ ಜನವಿರೋಧಿ ನೀತಿಗಳ ವಿರುದ್ದ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುವ ಸಮಾವೇಶದಲ್ಲಿ ವಿವಿಧ ರೈತ ಸಂಘಟನೆಗಳ ಮುಖಂಡರ ಜತೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಮುಖಂಡರು ಭಾಗವಹಿಸಲಿದ್ದಾರೆ ಎಂದರು.ತಾ.ಪಂ.ನೂತನ ಅಧ್ಯಕ್ಷ ಪುಟ್ಟಸ್ವಾಮಿ, ತಾ.ಪಂ.ಉಪಾಧ್ಯಕ್ಷ ಸಿ.ಮಾಧು,ಜಿಲ್ಲಾ ಪಂಚಾಯಿತಿ ಸದಸ್ಯೆ ಸುಜಾತ ಕೆ.ಎಂ.ಪುಟ್ಟು, ತಾಲ್ಲೂಕು ಪಂಚಾಯಿತಿ ಸದಸ್ಯರಾದ ವಿ.ಪಿ.ನಾಗೇಶ್, ವಿಶ್ವಾಸ್,ಪುರಸಭೆ ಸದಸ್ಯರಾದ ಶಿವಕುಮಾರ್, ರಾಜಶೇಖರ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಂದರ್ ರಾಜ್, ದೇವರಾಜು, ಮುಖಂಡರಾದ ಕೆ.ಚೌಡಯ್ಯ, ಗಂಗಾರಾಜೇಅರಸ್, ರಮೇಶ್, ಬಸವರಾಜು,ಪೆಟ್ರೋಲ್ ಬಂಕ್ ಮಹದೇವು, ಟಿಎಪಿಸಿಎಂಎಸ್ ನಿರ್ದೇಶಕರಾದ ಬಸವೇಶ್, ಬಸವರಾಜು, ಲಿಂಗರಾಜು, ಚೌಡಯ್ಯ, ಕುಳ್ಳಚನ್ನಂಕಯ್ಯ ಸೇರಿದಂತೆ ಹಲವರು ಭಾಗಿಯಾಗಿದ್ದರು.

ವರದಿ-ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Continue Reading
Click to comment

Leave a Reply

Your email address will not be published. Required fields are marked *

Uncategorized

ಗದಗ ಬ್ರೇಕಿಂಗ್ BIG IMPACT…… ವೃದ್ಧೆಯ ಕತ್ತಲ ಬದುಕಿಗೆ ಬೆಳಕಾದ ಎಕ್ಸ್ ಪ್ರೆಸ್ ಟಿವಿ

Published

on

By

ಗದಗ: ಗದಗ ತಾಲೂಕಿನ ಕಲ್ಲೂರು ಗ್ರಾಮದ ವೃದ್ಧೆ ಯಲ್ಲಮ್ಮ ಪಾಟೀಲ್ ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆ ಎಕ್ಸ್ ಪ್ರೆಸ್ ಟಿವಿ ಪ್ರಸಾರ ಮಾಡಿದ್ದ ವರದಿ ಫಲಶೃತಿಗೊಂಡಿದೆ.

ಸದ್ಯ ಕಳೆದ ೨೦ ವರ್ಷಗಳಿಂದ ಸೂರು ಇಲ್ಲದೆ ವೃದ್ಧೆ ಯಲ್ಲಮ್ಮ ಪಾಟೀಲ್ ಕಣ್ಣೀರಲ್ಲಿ ಕೈ ತೊಳೆಯುವಂತಾಗಿತ್ತು, ಇದರ ಹಿನ್ನೆಲೆಯಲ್ಲಿ ಇದರ ಬಗ್ಗೆ ಎಕ್ಸ್ ಪ್ರೆಸ್ ಟಿವಿ ವಿಸ್ತೃತವಾದ ವರದಿ ಪ್ರಸಾರ ಮಾಡಿತ್ತು.

ಹೀಗಾಗಿ ಈ ವರದಿಯಿಂದ ತಕ್ಷಣ ಎಚ್ಚೆತ್ತುಕೊಂಡ ಗದಗದ ಏಕಲವ್ಯ ಟ್ರಸ್ಟ್ , ಜಿಲ್ಲಾ ಪಂಚಾಯತ್ ಅಧಿಕಾರಗಳು ಹಾಗೂ ಧರ್ಮಸ್ಥಳ ಸಂಘ ಮತ್ತು ಇದೇ ಗ್ರಾಮದ ಚಂದ್ರಶೇಖರ ಹರಿಜನ ಹಾಗೂ ಸ್ನೇಹಿತರು ವೃದ್ಧೆ ಯಲ್ಲಮ್ಮಗೆ ಸಹಾಯ ಮಾಡಲು ಮುಂದಾಗಿದ್ದಾರೆ.

ಅAದ ಹಾಗೇ ಅಜ್ಜಿಗೆ ಸ್ವಂತ ಖರ್ಚಿನಲ್ಲಿ ಉಚಿತವಾಗಿ ಮನೆ ನಿರ್ಮಾಣ ಮಾಡಲು ಚಂದ್ರಶೇಖರ ಹರಿಜನ ಮತ್ತವರ ಯುವ ಪಡೆ ಪಣ ತೊಟ್ಟರೇ, ಜಿಲ್ಲಾ ಪಂಚಾಯತ್ ಅಧಿಕಾರಿಗಳೂ ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆ ಅಡಿಯಲ್ಲಿ ಮನೆ ಮಂಜೂರು ಭರವಸೆ ನೀಡಿದ್ದಾರೆ.

ಇನ್ನು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಸಿ.ಆರ್.ಮುಂಡರಗಿ, ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ ಪರಿಶೀಲನೆ ನಡೆಸಿದ್ರು..ಈ ವೇಳೆ ವೃದ್ಧೆ ಯಲ್ಲಮ್ಮ ಪಾಟೀಲ್ ಸಮಸ್ಯೆ ಆಲಿಸಿದ ಅಧಿಕಾರಿಗಳು ಮನೆ ಮಂಜೂರು ಮಾಡುವಂತೆ ಪಿಡಿಒಗೆ ಸೂಚನೆ ನೀಡಿದ್ದಾರೆ.

ಇದೇ ವೇಳೆ ವೃದ್ಧೆ ಯಲ್ಲಮ್ಮ ಪಾಟೀಲ್‌ಗೆ ಸುಮಾರು ಐದು ತಿಂಗಳಿಗೆ ಆಗುವಷ್ಟು ಆಹಾರ ಧಾನ್ಯಗಳ ಕಿಟ್ ಕೂಡ ವಿತರಣೆ ಮಾಡಲಾಗಿದೆ.

ಒಟ್ಟಾರೆ ಕತ್ತಲ ಬದುಕಿನಲ್ಲಿ ಜೀವನ ನಡೆಸುತ್ತಿದ್ದ ತನ್ನ ಬಾಳಿಗೆ ಬೆಳಕಾದ ಎಕ್ಸ್ ಪ್ರೆಸ್ ಟಿವಿಗೆ ವೃದ್ಧೆ ಯಲ್ಲಮ್ಮ ಹಾಗೂ ಸ್ಥಳೀಯರು ಧನ್ಯವಾದ ಅರ್ಪಿಸಿದ್ದಾರೆ.

 

ರಾಕೇಶ್ ಎಕ್ಸ್ ಪ್ರೆಸ್ ಟಿವಿ ಗದಗ

 

Continue Reading

Uncategorized

ರೈಲ್ವೇ ಜಂಕ್ಷನ್ ತಪಾಸಣೆ- ಜನರಲ್ ಮ್ಯಾನೇಜರ್ ಅಜಯ್ ಕುಮಾರ್…!

Published

on

By

ಬಂಗಾರಪೇಟೆ: ಬಂಗಾರಪೇಟೆಯ ರೈಲ್ವೇ ಜಂಕ್ಷನ್ ತಪಾಸಣೆ ಹಾಗೂ ಮಕ್ಕಳ ಉದ್ಯಾನವನ ಉದ್ಘಾಟನೆಗೆ ರೈಲ್ವೇ ಜನರಲ್ ಮ್ಯಾನೇಜರ್ ಅಜಯ್ ಕುಮಾರ್ ಸಿಂಗ್ ಬಂಗಾರಪೇಟೆ ರೈಲ್ವೇ ಜಕ್ಷಂನ್ ಗೆ ಭೇಟಿ ನೀಡಿದರು. ಅಜಯ್ ಕುಮಾರ್ ಸಿಂಗ್ ಭೇಟಿ ನೀಡುವ ಸಂದರ್ಭದಲ್ಲಿ ಸಂಸದ ಮುನಿಸ್ವಾಮಿ ಅವರನ್ನು ಭೇಟಿ ಮಾಡಿದರು. ಜಿಜೆಪಿಯ ಮುಖಂಡರು ಜಿ.ಪಂ.ಸದಸ್ಯ ಮಹೇಶ್ ನೇತ್ರತ್ವದಲ್ಲಿ ಹುಣಸನಹಳ್ಳಿ ಗ್ರಾಮ ಪಂಚಾಯತಿಯ ಸದಸ್ಯ ಹೆ.ಚ್.ಆರ್.ಶ್ರೀನಿವಾಸ್ ಮತ್ತು ಗ್ರಾಮಸ್ಥರು, ಹಾಗೂ ರೈತ ಸಂಘದ ಮುಖಂಡ ರಾಮೇಗೌಡ ಬಂಗಾರಪೇಟೆ ಮತ್ತು ಬೂದಿಕೊಟೆ ರಸ್ತೆ ಮಾರ್ಗದಲ್ಲಿ ಇರುವ ರೈಲ್ವೇ ಗೇಟ್ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನವು ಮಾಡಿ ಕೊಡಬೇಕೆಂದು ಅಜಯ್ ಕುಮಾರ್ ಸಿಂಗ್ ಮತ್ತು ಸಂಸದ ಮುನಿಸ್ವಾಮಿ ಅವರೊಡನೆ ತೆರಳಿ ಸ್ಥಳ ಪರಶೀಲನೆ ನಡೆಸುವಂತೆ ಒತ್ತಾಯ ಮಾಡುವ ಮೂಲಕ ಸ್ಥಳ ಪರಿಶೀಲನೆ ಮಾಡಿದರು. ಸಂಸದ ಮುನಿಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿ ಬಂಗಾರಪೇಟೆ ಬೂದಿಕೋಟೆ ರಸ್ತೆಯಲ್ಲಿರುವ ಗೇಟ್ ಅನ್ನು ತೆರವುಗೊಳಿಸಲು ಸಹಾಯ ಮಾಡುವುದಾಗಿ ತಿಳಿಸಿದರು. ಕೊಯ್ಯಮತ್ತೂರು ರೈಲು ನಿಲುಗಡೆ ಮಾಡಿಸಲು ಒಪ್ಪಿಗೆ ಸೂಚಿಸಿದ್ದಾರೆ. ಕೊರೋನಾ ನಂತರ ಭಾರತದಲ್ಲಿ ಬುಕ್ಂಗ್ ರಹಿತ ರೈಲು ಪ್ರಯಾಣ ಆರಂಬಿಸಿಲ್ಲ ಆದರೆ ಮೊಟ್ಟಮೊದಲಿಗೆ ಸ್ವರ್ಣ ರೈಲನ್ನು ಬುಕ್ಕಿಂಗ್ ರಹಿತ ಓಡಾಟ ಪ್ರಾರಂಭಿಸಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಬಿ.ವಿ.ಮಹೇಶ್ ಅಂಬರೀಶ್, ಹೊಸರಾಯಪ್ಪ, ನಾಗೇಶ್, ಹನುಮಪ್ಪ ಹೆಚ್ಚ.ಆರ್. ಶ್ರೀನಿವಾಸ್,ಬಾಬು, ಮಹೇಶ್, ಜಗನ್, ನಾರಾಯಣಸ್ವಾಮಿ. ಇನ್ನೂ ಅನೇಕ ಮುಖಂಡರು ಹಾಜರಿದ್ದರು.

ವರದಿ- ಬಾಬು ಎಕ್ಸ್ ಪ್ರೆಸ್ ಟಿವಿ ಬಂಗಾರಪೇಟೆ

Continue Reading

Uncategorized

ಮುಸ್ಲಿಂ ಈದ್ಗಾ ಮತ್ತು ಖಬರಸ್ತಾನ್ ಕಮಿಟಿಗಾಗಿ ಚುನಾವಣೆ..!

Published

on

By

ಸಿರಗುಪ್ಪ: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನಲ್ಲಿ ಮುಸ್ಲಿಂ ಈದ್ಗಾ ಮತ್ತು ಖಬರಸ್ತಾನ್ ಗಳಿಗೆ ನೂತನ ಕಮಿಟಿ ರಚಿಸಲು ಪಾರದರ್ಶಕತೆಗಾಗಿ ರಾಜ್ಯ ವಕ್ಫ್ ಬೋರ್ಡ್ ವತಿಯಿಂದ ಚುನಾವಣಾ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿತ್ತು. ಕಮಿಟಿಯಲ್ಲಿ ಒಟ್ಟು 611 ಮತದಾರಿದ್ದು,ಈ ಪೈಕಿ 44 ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದಾರೆ. 586 ಜನ ತಮ್ಮ ಹಕ್ಕಿನ ಮತ ಮತ ಚಲಾಯಿಸಿದ್ದಾರೆ. ನಗರದ ತಾಲ್ಲೂಕು ಕ್ರೀಡಾಂಗಣದ ಬಳಿ ಇರುವ ಉರ್ದು ಪ್ರೌಢ ಶಾಲೆಯಲ್ಲಿ ಚುನಾವಣಾ ಆಯೋಗದ ಪ್ರಕ್ರಿಯೆ ನಡೆಸಲಾಯಿತು. ಕೊರೋನಾ ಹಿನ್ನಲೆಯಲ್ಲಿ ಮತದಾರರು ಮಾಸ್ಕ್ ,ಸಾಮಾಜಿಕ ಅಂತರ, ಸಾನಿಟೈಸರ್ ಉಪಯೋಗಿಸಿಕೊಂಡು ಮತ ಚಲಾಯಿಸಿದ್ದಾರೆ.ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ನಡೆದಿದ್ದು, ಮತದಾರರು ಅತ್ಯುತ್ಸಾಹದಿಂದ ಮತ ಚಲಾಯಿಸಿದ್ದಾರೆ. ಕಮಿಟಿಯ ಅಡಳಿತಾಧಿಕಾರಿಯಾದ ಮಹಮದ್ ಸಾಧಿಕ್ ಬಾಷಾ ಇವರು ಚುನಾವಣಾ ಕರ್ತವ್ಯ ನಿರ್ವಹಿಸಿದ್ದಾರೆ. ಇನ್ನು ಮತಗಟ್ಟೆಗೆ ಸಿರುಗುಪ್ಪ ಪೊಲೀಸ್ ಠಾಣಾ ಅಧಿಕಾರಿಗಳು ಸೂಕ್ತ ಬಂದೋಬಸ್ತ್ ಒದಗಿಸಿದ್ದು, ಶಾಂತಹಿಯುತವಾಗಿ ಮತದಾನ ಪ್ರಕ್ರಿಯೆಯನ್ನು ನೇರೆವೆರಿಸಲಾಯಿತು.

ವರದಿ- ಡಿ. ಅಲಂ ಬಾಷಾ ಎಕ್ಸ್ ಪ್ರೆಸ್ ಟಿವಿ ಸಿರುಗುಪ್ಪ.

Continue Reading

Trending

Copyright © 2023 EXPRESS TV KANNADA

canl覺 ma癟 izle selcuksports deneme bonusu deneme bonusu veren siteler bahis siteleri jojobet http://www.iztacalco.cdmx.gob.mx/inicio/guvenilir-bahis-siteleri.html deneme bonusu casino siteleriHacklink SatışıHack forumyaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirdeneme bonusu veren sitelerkareasbet girişBursa EscortBakırköy Escort, Ataköy Escortbahis forumkareasbetbetingo güncel girişdizimatFındıkzade Escortbedavabahis.onlineBitcoin Kabul Eden Bahis Sitelerigüvenilir casino siteleridigital marketing agencydeneme bonusu veren sitelergobahis girişasper casino girişhermesbetTelegram Gruplarıistanbul escortesbet girişbullbahis girişbenimbahis girişbenimbahis