Uncategorized

ಕಾರವಾರದಲ್ಲಿ ದೋಣಿ ದುರಂತ 7 ಮೀನುಗಾರರು ಅದೃಷ್ಟವಶಾತ್ ಪಾರು..!

Published

on

ಕಾರವಾರ : ಮರಳುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗಿದ ಘಟನೆ ಕುಮುಟಾದಲ್ಲಿ ನಡೆದಿದೆ. ಅದೃಷ್ಟವಶಾತ್ 7 ಜನ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ.ಕುಮಟಾ ಮಾನೀರ್ ಗ್ರಾಮದ ಸಮೀಪ ಅಘನಾಶಿನಿ ನದಿಯಲ್ಲಿ ಈ ಅವಘಡ ಸಂಭವಿಸಿದ್ದು, ದೋಣಿಯಲ್ಲಿದ್ದ 7 ಮಂದಿ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇತರರ ಮೀನುಗಾರರೇ ಅವರನ್ನು ರಕ್ಷಿಸುವ ಮೂಲಕ ಜೀವ ಉಳಿಸಿದ್ದಾರೆ. ಸದ್ಯ ಯಾವುದೇ ದುರ್ಘಟನೆ ನಡೆಯದಂತೆ ಪಾರಾಗಿದ್ದಾರೆ. ತಾಲೂಕಿನ ದೀವಗಿಯ ನಿತ್ಯ ಅಂಬಿಗ ಅವರಿಗೆ ಸೇರಿದ ದೋಣಿ ಇದಾಗಿದ್ದು, ಬೆಳಗ್ಗೆ ಎಂದಿನಂತೆ ಮರಳುಗಾರಿಕೆಗೆ ತೆರಳಿದ್ದರು. ಈ ವೇಳೆ ದೋಣಿಯ ಮೇಲೆ ಭಾರ ಹೆಚ್ಚಾದ ಪರಿಣಾಮ ನದಿಯಲ್ಲಿ ಮಗುಚಿದೆ. ಈ ವೇಳೆ ದೋಣಿಯಲ್ಲಿದ್ದ 7 ಜನ ನದಿಯಲ್ಲಿ ಬಿದ್ದಿದ್ದಾರೆ. ಇದನ್ನು ಕಂಡ ಹತ್ತಿರದ ಮತ್ತೊಂದು ದೋಣಿಯ ಮೀನುಗಾರರು ತಕ್ಷಣವೇ ಎಚ್ಚೆತ್ತುಕೊಂಡು ದೋಣಿಯಲ್ಲಿ ಒಟ್ಟು 7 ಜನ ಮೀನುಗಾರರನ್ನು ರಕ್ಷಿಸಿದ್ದಾರೆ. ಇದರಿಂದಾಗಿ ದೋಣಿಯಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version