Uncategorized

ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ..!

Published

on

ಪಿರಿಯಾಪಟ್ಟಣ: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಪತ್ರಿಕಾ ಭವನದ ಕಚೇರಿಯಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಕರ್ತರಿಗೆ ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿ ಅವರು ಆದರ್ಶವಾಗಬೇಕು.ರಾಜಶೇಖರ್ ಕೋಟಿ ದತ್ತಿ ಪ್ರಶಸ್ತಿ ನಿಧಿ ಸ್ಥಾಪಿಸಿ 1 ಲಕ್ಷ ಜಮಾ ಮಾಡಲಾಗಿದೆ. ಇನ್ನು ಮುಂದೆ ಪ್ರತಿ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿಯೂ ಪ್ರಶಸ್ತಿ ನೀಡಲಾಗುತ್ತದೆ, ಅಕ್ರಿಡಿಟೇಶನ್ ಇರುವ ಪತ್ರಕರ್ತರಿಗೆ ಮಾತ್ರ ಆಯುಷ್ಮಾನ್ ಕಾರ್ಡ್ ನೀಡಲಾಗಿದೆ. ಎಲ್ಲಾ ಪತ್ರಕರ್ತರಿಗೂ ಸಿಗುವಂತೆ ಮಾಡಬೇಕೆಂಬ ಸಂಘದ ಮನವಿಗೆ ಸರ್ಕಾರ ಸ್ಪಂದಿಸಿದೆ. ಮುಂದಿನ ದಿನಗಳಲ್ಲಿ ಕಾರ್ಯನಿರತ ಪತ್ರಕರ್ತರಿಗೂ ಆಯುಷ್ಮಾನ್ ಕಾರ್ಡ್ ನೀಡುವ ಪ್ರಕ್ರಿಯೆಗೆ ಚಾಲನೆ ಸಿಗಲಿದೆ ಎಂದು ತಿಳಿಸಿದರು.ಈ ಕಾರ್ಯಕ್ರಮದಲ್ಲಿ ಆಂದೋಲನ ದಿನಪತ್ರಿಕೆ ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿ ಮಾತನಾಡಿದರು.ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಬಾಬು,ಉಪಾಧ್ಯಕ್ಷ ಎಂ.ಸುಬ್ರಮಣ್ಯ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ- ರಾಮೇಗೌಡ ಮಾಗಳಿ ಎಕ್ಸ್ ಪ್ರೆಸ್ ಟಿವಿ ಪಿರಿಯಾಪಟ್ಟಣ

Click to comment

Trending

Exit mobile version