ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳ ಕೊಳ್ಳಗಳು ತುಂಬಿ ನಿಂತಿವೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತೊಗರಿ, ಸೂರ್ಯಕಾಂತಿ ಬೆಳೆ ಸಂಪೋರ್ಣವಾಗಿ ನೆಲ ಕಚ್ಚಿದ್ದು ರೈತರು ಕಂಗಾಲಾಗಿದ್ದಾರೆ. ಬೆಳೆಗಳು ನೀರಿನಿಂದ ಸಂಪೂರ್ಣವಾಗಿ ಜಲಾವೃತವಾಗಿದ್ದು ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಸಂಕಷ್ಟದಲ್ಲಿ ಸಿಲುಕಿರುವ ರೈತರಿಗೆ ಸರಕಾರ ಸೂಕ್ತ ಪರಿಹಾರ ನೀಡಬೇಕೆಂದು ರೈತರು ಪಟ್ಟು ಹಿಡಿದಿದ್ದಾರೆ.
ವರದಿ-ರಾಜಕುಮಾರ ಹಿರೇಮಠ ಎಕ್ಸ್ ಪ್ರೆಸ್ ಟಿವಿ ಆಳಂದ