ಹುಬ್ಬಳ್ಳಿ: ನಿರಂತರವಾಗಿ ಸುರಿಯುತ್ತಿರಯವ ಮಳೆಯಿಂದ ಹುಬ್ಬಳ್ಳಿ, ಕುಂದಗೋಳದಲ್ಲಿ ರೈತ ಬೆಳೆದ ಶೇಂಗಾ ಬೆಳೆ ಹಾನಿ ಸಂಭವಿಸಿದೆ. ಕಳೆದ ಐದಾರು ದಿನಗಳಿಂದ ಮಳೆಯಾಗುತ್ತಿದ್ದು ಮಳೆಯಿಂದ ಶೇಂಗಾ ಬೆಳೆ ಹಾನಿಯಾಗಿದೆ. ಕಳೆದ ಬಾರಿಯೂ ಪ್ರವಾಹಕ್ಕೆ ಶೇಂಗಾ, ಸೇರಿದಂತೆ ಇತರೆ ಬೆಳೆಗಳು ಕೊಚ್ಚಿ ಹೋಗಿದ್ದವು. ಈ ಮಳೆಯಿಂದ ಅಳಿದುಳಿದ ಬೆಳೆಗಳ ಪಡೆಯಲು ರೈತರ ಹರಸಾಹಸ ಪಡಬೇಕಾಗಿದೆ.ಬೆಳೆಗಳನ್ನು ಕಳೆದುಕೊಂಡು ರೈತರು ಕಂಗಾಲಾಗಿದ್ದು ರೈತರಲ್ಲಿ ಆತಂಕ ಹೆಚ್ಚಾಗಿದೆ.ಕೂಡಲೇ ಬೆಂಬಲ ಬೆಲೆ ನೀಡಿ, ಖರೀದಿ ಕೇಂದ್ರ ತೆರೆಯಲು ರೈತರು ಒತ್ತಾಯಿಸಿದ್ದಾರೆ.
ವರದಿ-ರಾಜುಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ