ಕೋಲಾರ

ಅವೈಜ್ಞಾನಿಕವಾಗಿ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಖಂಡಿಸಿ ಪ್ರತಿಭಟನೆ..!

Published

on

ಕೋಲಾರ: ಕೋಲಾರ ಜಿಲ್ಲೆಯಾದ್ಯಂತ ಅವೈಜ್ಞಾನಿಕವಾಗಿ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಮಾಡಿರುವುದನ್ನು ಖಂಡಿಸಿ ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಬಂಗಾರಪೇಟೆ ಪಟ್ಟಣದ ಕುಂಬಾರಪಾಳ್ಯದಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ರೈಲ್ವೆ ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿದ್ದು, ನಿನ್ನೆ ನೀರಿನಲ್ಲಿ ಆಟವಾಡಲು ಹೋಗಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳಗಿ ಸಾವನ್ನಪ್ಪಿದ್ರು. ಇನ್ನೂ ನೀರಿನಲ್ಲಿ ಮುಳಗಿ ಮೃತಪಟ್ಟ ಮಕ್ಕಳ ಕುಟುಂಬಸ್ಥರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ರು. ಅಲ್ಲದೇ ಜಿಲ್ಲೆಯಾದ್ಯಂತ ಅವೈಜ್ಞಾನಿಕವಾಗಿ ಅಂಡರ್ ಪಾಸ್ ನಿರ್ಮಾಣ ಮಾಡಿರುವ ಎಂಜಿನಿಯರ್ ಹಾಗೂ ಗುತ್ತಿಗೆದಾರರ ವಿರುದ್ಧ ಗೂಂಡ ಕಾಯ್ದೆ ಅಡಿ ದೂರು ದಾಖಲಿಸುವಂತೆ ರೈತ ಸಂಘದ ಕಾರ್ಯಕರ್ತರು ಒತ್ತಾಯಿಸಿದ್ರು.

ವರದಿ-ವಿ.ರಾಮಕೃಷ್ಣ ಎಕ್ಸ್ ಪ್ರೆಸ್ ಟಿವಿ ಕೋಲಾರ

Click to comment

Trending

Exit mobile version