ತಿಪಟೂರು

ಅಕ್ಷರ ದಾಸೋಹ ಸಿಬ್ಬಂದಿಗೆ ಆಹಾರ ಕಿಟ್ ವಿತರಣೆ..!

Published

on

ತಿಪಟೂರು: ಸರ್ಕಾರಿ ಶಾಲೆಯಲ್ಲಿನ ಅಕ್ಷರ ದಾಸೋಹ ಕಾರ್ಯಕ್ರಮದಡಿ ಬಿಸಿಯೂಟ ತಯಾರಿಕೆ ಕಾರ್ಯಕರ್ತೆಯರಿಗೆ ಆಹಾರ ಧಾನ್ಯಗಳ ಪಡಿತರ ಕಿಟ್ಟನ್ನು ಕಾಂಗ್ರೆಸ್ ಮುಖಂಡರಾದ ಸಿ.ಬಿ ಶಶಿಧರ್ ಅವರು ವಿತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಕರೋನಾ ಕಾರಣದಿಂದ ಸರ್ಕಾರವು ಶಾಲೆಗಳನ್ನು ತೆರೆಯಲು ಇನ್ನೂ ಅನುಮತಿ ನೀಡಿಲ್ಲ ಮತ್ತು ಸರ್ಕಾರ ನೀಡುತ್ತಿದ್ದ ಅಲ್ಪ ಸಂಭಾವನೆಯೂ ಇಲ್ಲದಂತಾಗಿದೆ ಎಂಬ ವಿಷಯ ತಿಳಿದು ಈ ಆಹಾರದ ಕಿಟ್ ನೀಡಿ ನಮ್ಮ ಕೈಲಾದ ಸಹಾಯ ಮಾಡುತ್ತಿದ್ದೇವೆ. ತಾಲ್ಲೂಕಿನಲ್ಲಿ ಸುಮಾರು 500 ಬಿಸಿಯೂಟ ಕಾರ್ಯಕರ್ತೆಯರಿದ್ದು ಕರೋನಾ ಬಂದಾಗಿನಿಂದ ಶಾಲೆಗಳು ಆರಂಭವಾಗದ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೊಳಗಾಗಿದ್ದು ಬಿಸಿಯೂಟ ಕಾರ್ಯಕರ್ತೆಯರ ಸಂಘದ ಅಧ್ಯಕ್ಷರಾದ ಅನುಸೂಯಮ್ಮ ಮತ್ತು ಕಾರ್ಯದರ್ಶಿ ಲಕ್ಷ್ಮಿ ತಿಳಿಸಿದರು ಆದ್ದರಿಂದ ಮೊದಲ ಹಂತವಾಗಿ ಸುಮಾರು 70 ಬಿಸಿಯೂಟ ಕಾರ್ಯಕರ್ತೆಯರ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ಟನ್ನು ವಿತರಿಸುತ್ತಿದ್ದೇನೆ ಮುಂದೆ ಉಳಿದವರಿಗೂ ವಿತರಿಸುವ ವ್ಯವಸ್ಥೆ ಮಾಡಲಾಗುವುದು ಅಂತ ತಿಳಿಸಿದರು.

ವರದಿ-ಸಿದ್ದೇಶ್ವರ ಸಿಎನ್ ಎಕ್ಸ್ ಪ್ರೆಸ್ ಟಿವಿ ತಿಪಟೂರು.

Click to comment

Trending

Exit mobile version