Connect with us

ಬೀದರ್

ಖಾನಾಪೂರ: ಮೈಲಾರ ಮಲ್ಲಣ್ಣಾ ಪಲ್ಲಕ್ಕಿ ಉತ್ಸವ; ಈಶ್ವರ್ ಖಂಡ್ರೆ, ಬಂಡೆಪ್ಪ ಖಾಶೆಂಪುರ್ ಭಾಗಿ

Published

on

ಬೀದರ್: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಾಪೂರದ ಮೈಲಾರ ಮಲ್ಲಣ್ಣಾ ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರು, ಭಾಲ್ಕಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಈಶ್ವರ್ ಖಂಡ್ರೆ, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ಅವರು ಚಾಲನೆ ನೀಡಿದರು. ನಿನ್ನೆ ರಾತ್ರಿ 11.30ರ ಸುಮಾರಿಗೆ ದೇವಸ್ಥಾನಕ್ಕೆ ಆಗಮಿಸಿದ ಈಶ್ವರ್ ಖಂಡ್ರೆ, ಬಂಡೆಪ್ಪ ಖಾಶೆಂಪುರ್ ಅವರು, ಸಾಂಪ್ರದಾಯಿಕ ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊರೊನಾ ಮಹಾಮಾರಿಯ ಹಿನ್ನೆಲೆಯಲ್ಲಿ ಈ ವರ್ಷ ಪಲ್ಲಕ್ಕಿ ಉತ್ಸವ ಕಾರ್ಯಕ್ರಮವನ್ನು ಸರಳವಾಗಿ, ಸಾಂಪ್ರದಾಯಿಕವಾಗಿ ಆಚರಿಸಲಾಗಿದೆ. ಕೊರೊನಾ ಹಾವಳಿ ಇಲ್ಲದಿದ್ದರೆ ದೊಡ್ಡಮಟ್ಟದ ಜಾತ್ರೆ ಇಲ್ಲಿ ನಡೆಯುತ್ತಿತ್ತು. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸಾಂಪ್ರದಾಯಿಕವಾಗಿ ಆಚರಣೆ ಮಾಡಿದ್ದೇವೆಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಗೀತಾ ಪಂಡಿತ್ ರಾವ್ ಚಿದ್ರಿ, ಮುಜರಾಯಿ ತಹಶಿಲ್ದಾರ ಅನಂತರಾವ್ ಕುಲಕರ್ಣಿ, ಪ್ರಧಾನ ಅರ್ಚಕ ಬಸಪ್ಪ ಹೀರೆವಗ್ಗೆ, ಮುಖಂಡರಾದ ಕೆ.ಡಿ ಗಣೇಶ್, ನಿರಂಜಪ್ಪ ಪಾತ್ರೆ, ಮಲ್ಲಿಕಾರ್ಜುನ ಹೀರೆವಗ್ಗೆ, ಮಾರುತಿರಾವ್ ಪಾಟೀಲ್, ಧನರಾಜ್ ಪಾಟೀಲ್, ರವಿ ದುರ್ಗೆ, ಬಸವರಾಜ್ ಎಡೆ, ಪ್ರಕಾಶ್ ಪಾಟೀಲ್, ರಾಜಕುಮಾರ ಪಾಟೀಲ್, ವಿಶ್ವನಾಥ ಗುಮ್ಮೆ, ದೇವಸ್ಥಾನ ಸಮಿತಿ ಮುಖಂಡರು, ಅರ್ಚಕರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Continue Reading
Click to comment

Leave a Reply

Your email address will not be published. Required fields are marked *

ಬೀದರ್

ಬೆಳೆ ಹಾನಿ: ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ, ಪರಿಶೀಲನೆ..

Published

on

By

ಬೀದರ್: ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ತೊಗರಿ, ಕಬ್ಬು ಸೇರಿದಂತೆ ಅನೇಕ ಬೆಳೆಗಳು ಹಾನಿಗಿಡಾಗಿದ್ದು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳ ಜಮೀನುಗಳಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕ್ಷೇತ್ರ ವ್ಯಾಪ್ತಿಯ ಬಾಪೂರ್, ಮಗದಾಳ, ಮರಕುಂದಾ ಗ್ರಾಮಗಳ ಜಮೀನುಗಳಿಗೆ ಭೇಟಿ ನೀಡಿದ ಅವರು, ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು. ಇದೇ ವೇಳೆ ಮರಕುಂದಾ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದರು. ಗ್ರಾಮದ ಮಹಿಳೆಯರು ತಮ್ಮೂರಿನ ಸಮಸ್ಯೆಗಳನ್ನು ಶಾಸಕರ ಮುಂದಿಟ್ಟರು. ಶಾಸಕರು ಶೀಘ್ರವಾಗಿ ಪರಿಹರಿಸುವ ಭರವಸೆ ನೀಡಿದರು. ಬಳಿಕ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್, ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಬಹುತೇಕ ರೈತರ ಜಮೀನುಗಳಲ್ಲಿ ನೀರು ನುಗ್ಗಿದ್ದು, ಅನೇಕ ಬೆಳೆಗಳು ಹಾನಿಗೊಳಗಾಗಿವೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲ – ಶೂಲ ಮಾಡಿ ಬೀಜ, ಗೊಬ್ಬರ ಖರೀದಿಸಿದ ರೈತರು ಹಾಕಿದ ಬಂಡವಾಳವು ತೆಗೆದುಕೊಳ್ಳಲಾಗದಂತ ಪರಿಸ್ಥಿತಿಗೆ ಸಿಲುಕಿದ್ದಾರೆ. ಸರ್ಕಾರ ರೈತರ ನೆರವಿಗೆ ಬರಬೇಕಾಗಿದೆ. ಕೃಷಿ ಅಧಿಕಾರಿಗಳು, ಸಂಬಂಧಿಸಿದ ಸಚಿವರು ಹಾನಿಗೊಳಗಾದ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿ ಸಮೀಕ್ಷೆ ನಡೆಸಬೇಕು. ಆದಷ್ಟು ಬೇಗ ಸರ್ಕಾರ ರೈತರ ನೆರವಿಗೆ ದಾವಿಸಬೇಕು ಎಂದರು. ಈ ಸಂದರ್ಭದಲ್ಲಿ ಬೀದರ್ ಉಪ ಕೃಷಿ ನಿರ್ದೇಶಕ ಸೋಮಶೇಖರ್ ಬಿರಾದಾರ, ಬಗದಲ್ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಸಂಗಮೇಶ, ಜಲ ಸಂಪನ್ಮೂಲ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿ ಎಮ್.ಎ ಮುಕ್ಕಿಮ್, ಬಾಪೂರ್, ಮಗದಾಳ, ಮರಕುಂದಾ ಗ್ರಾಮದ ರೈತರು, ಗ್ರಾಮಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಅನೇಕರಿದ್ದರು.

Continue Reading

ಬೀದರ್

ಮನೆ ಹಾನಿ: ಭೇಟಿ ನೀಡಿ ಪರಿಶೀಲಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್..!

Published

on

By

ಬೀದರ್: ಇತ್ತೀಚೆಗೆ ಸುರಿದ ಮಳೆಯಿಂದಾಗಿ ಹಾನಿಗೊಳಗಾದ ತಾಲೂಕಿನ ಸಂಗೋಳಗಿ ಗ್ರಾಮದ ಬೊಮ್ಮಗೊಂಡೇಶ್ವರ ದೇವಸ್ಥಾನದ ಹತ್ತಿರವಿರುವ ಸರಸ್ವತಿ ಗಂಡ ಶಿವರಾಜ್ ರವರ ಮನೆಗೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಮನೆಗೆ ಭೇಟಿ ನೀಡಿ ಮನೆ ಕಳೆದುಕೊಂಡ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಬಂಡೆಪ್ಪ ಖಾಶೆಂಪುರ್,ಮನೆ ಸಂಪೂರ್ಣವಾಗಿ ಹಾಳಾಗಿದ್ದು,ಆದಷ್ಟು ಬೇಗ ಮನೆ ಕಳೆದುಕೊಂಡ ಕುಟುಂಬದವರಿಗೆ ಪರಿಹಾರ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮನೆ ಕಳೆದುಕೊಂಡ ಕುಟುಂಬದ ಸದಸ್ಯರು,ಬೀದರ್ ದಕ್ಷಿಣ ಜೆಡಿಎಸ್ ಅಧ್ಯಕ್ಷರು ಸಂಜುರೆಡ್ಡಿ ನಿರ್ಣಾ,ರಾಜಶೇಖರ ಬನ್ನಳ್ಳಿ, ರವಿ,ಅಶೋಕ್ ಪಾಟೀಲ್,ಅನಿಲ್ ಪಾಟೀಲ್,ಬಾಬು ಮಳಗಾರ,ಶ್ರೀನಿವಾಸ,ಮಾರುತಿ ಹತ್ತಿ,ಸ್ಯಾಮಸನ್,ಈಶ್ವರ್,ನಾಗಶೆಟ್ಟಿ ಪಾಟೀಲ್,ಮೆಹಬೂಬ್ ಸಾಬ,ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು,ಸ್ಥಳೀಯ ಮುಖಂಡರು,ಕಾರ್ಯಕರ್ತರು,ಗ್ರಾಮಸ್ಥರು ಸೇರಿದಂತೆ ಅನೇಕರಿದ್ದರು.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Continue Reading

ಬೀದರ್

ಮಳೆಗಾಗಿ ದೇವರ ಮೊರೆ ಹೋದ ಗ್ರಾಮಸ್ಥರು,ಶಾಸಕ ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ವಿಶೇಷ ಪೂಜೆ..!

Published

on

By

ಬೀದರ್ :ಜಿಲ್ಲೆಯಲ್ಲಿ ಮಳೆಯ ಅಭಾವ ಉಂಟಾದ ಪರಿಣಾಮ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನ್ನಳ್ಳಿ ಗ್ರಾಮಸ್ಥರು ಮಳೆರಾಯನಿಗಾಗಿ ದೇವರ ಮೊರೆ ಹೋಗಿದ್ದು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರ ನೇತೃತ್ವದಲ್ಲಿ ಗ್ರಾಮದ ಮೈಸಮ್ಮಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಮನ್ನಳ್ಳಿ ಕೆರೆ ವೀಕ್ಷಿಸಿ,ಮೈಸಮ್ಮಾ ದೇವಿಗೆ ಶಾಸಕರು ವಿಶೇಷ ಪೂಜೆ ಸಲ್ಲಿಸಿದರು. ಈ ಬಾರಿ ಜಿಲ್ಲೆಯಲ್ಲಿ ಕಡಿಮೆ ಪ್ರಮಾಣದ ಮಳೆಯಾಗಿದ್ದು, ಜಿಲ್ಲೆಯ ರೈತರಿಗೆ ಸಂಕಷ್ಟ ಎದುರಾಗಿದೆ.ಮೈಸಮ್ಮಾ ದೇವಿ ಜಿಲ್ಲೆಗೆ ಉತ್ತಮ ಮಳೆ ತರಲಿ. ಜಿಲ್ಲೆಯ ಕೆರೆ – ಕಟ್ಟೆಗಳು ಭರ್ತಿಯಾಗಲಿ. ಮನ್ನಳ್ಳಿ ಗ್ರಾಮದ ಕೆರೆ ತುಂಬಿ ರೈತರಿಗೆ, ಗ್ರಾಮಸ್ಥರಿಗೆ ಅನುಕೂಲವಾಗಲಿ,ಮೈಸಮ್ಮಾ ದೇವಿ ಉತ್ತಮ ಮಳೆ ಬೆಳೆಗಳನ್ನು ನೀಡಲಿ ಎಂದು ಪ್ರಾರ್ಥಿಸಿದರು.ಈ ಸಂದರ್ಭದಲ್ಲಿ ರಾಜು ಮುಲ್ಗೆ, ದೀಪಕ್,ಶಂಕರ್ ಬಾಬು ಸೇನಾ, ರಮೇಶ್ ಜಮಾದಾರ,ವೀರಶೆಟ್ಟಿ, ಚಂದ್ರಕಾಂತ ಮಡಿಕಿ, ಮಲ್ಲಿಕಾರ್ಜುನ, ಅನಿಲ್ ಪನ್ನಾಳಿ ಸೇರಿದಂತೆ ಗ್ರಾಮದ ವಿವಿಧ ಸಮುದಾಯಗಳ ಮುಖಂಡರು ಇದ್ದರು.

ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Continue Reading

Trending

Copyright © 2023 EXPRESS TV KANNADA

canl覺 ma癟 izle selcuksports deneme bonusu deneme bonusu veren siteler bahis siteleri jojobet http://www.iztacalco.cdmx.gob.mx/inicio/guvenilir-bahis-siteleri.html deneme bonusu casino siteleriHacklink SatışıHack forumyaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirdeneme bonusu veren sitelerkareasbet girişBursa EscortBakırköy Escort, Ataköy Escortbahis forumkareasbetbetingo güncel girişdizimatFındıkzade Escortbedavabahis.onlineBitcoin Kabul Eden Bahis Sitelerigüvenilir casino siteleridigital marketing agencydeneme bonusu veren sitelergobahis girişasper casino girişhermesbet