ನಾಗಮಂಗಲಃ ಮಂಡ್ಯ ಜಿಲ್ಲಾ ನ್ಯಾಯಾಂಗ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ನಾಗಮಂಗಲ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ನೂತನ ನ್ಯಾಯಾಲಯಗಳ ಸಂಕೀರ್ಣವನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕ್ ರವರು ಆನ್ ಲೈನ್- ವಿದ್ಯುನ್ಮಾನ ಮೂಲಕ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಮಂಡ್ಯ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಶ್ರೀಮತಿ ಕೆ.ಎಸ್.ಮುದಗಲ್ ಅಧ್ಯಕ್ಷೀಯ ಮಾತುಗಳಾಡಿದರು ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳಾದ ಬಿ.ಎಂ.ಶ್ಯಾಮ್ ಪ್ರಸಾದ್ ಆನ್ ಲೈನ್ ಮೂಲಕವೇ ಮಾತನಾಡಿದರು.: ಕಾರ್ಯಕ್ರಮದ ಅಧ್ಯಕ್ಷರ ಮೌಖಿಕ ಆದೇಶದಂತೆ ನ್ಯಾಯಾಂಗ ಇಲಾಖೆಯ ಡಿ ಗ್ರೂಪ್ ನೌಕರರಾದ ಭಾಗ್ಯಮ್ಮ ಹಾಗೂ ದೊಡ್ಡೇಗೌಡ ಅವರು ಶಿಲಾನ್ಯಾಸ ನೆರವೇರಿಸಿದ್ರು. ಈ ವೇಳೆ ಅನೇಕ ಗಣ್ಯರು ಉಪಸ್ಥಿತರಿದ್ದರು