ಹುಬ್ಬಳ್ಳಿ-ಧಾರವಾಡ

ಕಾಂಗ್ರೆಸ್ ಕಾರ್ಯಕರ್ತರಿಗೆ ಬುಲಾವ್ ನೀಡಿದ ಕುಲಕರ್ಣಿ ಆಪ್ತ ಸಹಾಯಕ.!

Published

on

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸಿಬಿಐ ವಿಚಾರಣೆಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಮೂರು ದಿನಗಳ ಕಾಲ ಹುಬ್ಬಳ್ಳಿಯಲ್ಲಿ ವಿಚಾರಣೆ ನಡೆಸಿ ಇಂದು ಧಾರವಾಡ ನ್ಯಾಯಾಲಯಕ್ಕೆ ಹಾಜರು ಪಡಿಸುತ್ತಿರುವ ಹಿನ್ನೆಲೆಯಲ್ಲಿ ವಿನಯ ಕುಲಕರ್ಣಿ ಆಪ್ತ ಸಹಾಯಕ ಪ್ರಶಾಂತ್ ಕಾರ್ಯಕರ್ತರಿಗೆ ಆಗಮಿಸುವಂತೆ ಧ್ವನಿ ಸಂದೇಶದ ಮೂಲಕ ಆಹ್ವಾನಿಸಿದ್ದಾರೆ.ಮೂರು ದಿನ ವಿಚಾರಣೆ ಬಳಿಕ ಹುಬ್ಬಳ್ಳಿಯಿಂದ ಧಾರವಾಡದ ನ್ಯಾಯಾಲಯಕ್ಕೆ ಹಾಜರು ಪಡಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಕಾರ್ಯಕರ್ತರು ಬರಬೇಕೆಂದು ಆಪ್ತ ಸಹಾಯಕ ಖಡಕ್ ಆಗಿ ಸಂದೇಶ ರವಾನೆ ಮಾಡಿದ್ದು,ಈಗ ಆ ಆಡಿಯೋ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗಾಗಲೇ ಮೂರು ದಿನ ಸಿಬಿಐ ಕಸ್ಟಡಿಯಲ್ಲಿರುವ ವಿನಯ ಕುಲಕರ್ಣಿಯನ್ನು ಧಾರವಾಡಕ್ಕೆ ಕರೆದುಕೊಂಡು ಹೋಗುತ್ತಿದ್ದು,ಉತ್ತರ ಕರ್ನಾಟಕ ಭಾಗದ ಬಹುತೇಕ ಕಾರ್ಯಕರ್ತರು ಜಮಾವಣೆಗೊಳ್ಳುವ ಸಾಧ್ಯತೆ ಇದೆ.

ವರದಿ-ರಾಜುಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳೀ

Click to comment

Trending

Exit mobile version