ತಿಪಟೂರು: ತಿಪಟೂರು ನಗರದ ಚಾಮುಂಡೇಶ್ವರಿ ಬಡಾವಣೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವ, ಮತ್ತು ಹಜರತ್ ಟಿಪ್ಪು ಸುಲ್ತಾನರ 271ನೇ ಜಯಂತೋತ್ಸವವನ್ನು ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಅಲ್ಪಸಂಖ್ಯಾತರ ಘಟಕ ತಿಪಟೂರು ವತಿಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಅಲ್ಪಸಂಖ್ಯಾತರ ಅಧ್ಯಕ್ಷರಾದ ಸೈಫುಲ್ಲಾ ರವರು ಪ್ರತಿ ವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವ ಮತ್ತು ಟಿಪ್ಪು ಜಯಂತಿಯನ್ನು ಪ್ರತಿ ವರ್ಷವೂ ಆಚರಿಸಿಕೊಂಡು ಬರುತ್ತಿದ್ದೇವೆ. ಕರ್ನಾಟಕದಲ್ಲಿ ಹಲವಾರು ಜಾತಿ ಧರ್ಮ ಸಂಸ್ಕೃತಿ ಇದೆ ಆದರೆ ನಾವು ಕನ್ನಡಿಗರು ನಾವೆಲ್ಲರು ಒಂದೆ ಜಾತಿ ,ಧರ್ಮದ ಭೇದ ಭಾವವಿಲ್ಲದೆ ನಾವೆಲ್ಲರೂ ಒಂದೇ ಎಂಬುದಾಗಿ ಕನ್ನಡಕ್ಕೆ ಪ್ರಾಮುಖ್ಯತೆ ನೀಡಬೇಕು ಕನ್ನಡ ಭಾಷೆಯನ್ನು ಎಲ್ಲರೂ ಮಾತನಾಡುವುದನ್ನು ಕಲಿತು ಕನ್ನಡವನ್ನು ಉಳಿಸಬೇಕು ಎಂದು ಈ ಮೂಲಕ ಮನವಿ ಮಾಡಿದರು.