ಲಿಂಗಸೂಗೂರು: ಈ ಬಾರಿ ಮಸ್ಕಿ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸನಗೌಡ ತುರವಿಹಾಳ ಅತೀ ಹೆಚ್ಚು ಮತಗಳಿಂದ ಗೆಲ್ಲುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಲಿಂಗಸೂಗೂರು ಪಟ್ಟಣದ ಕಾಂಗ್ರೆಸ್ ಶಾಸಕ ಡಿ ಎಸ್ ಹೂಲಗೇರಿ ನಿವಾಸದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ಸರಕಾರ ಈ ಭಾಗವನ್ನು ಸಂಪೂರ್ಣ ನಿರ್ಲಕ್ಷ ಮಾಡಿದ್ದು ಈ ಭಾಗದ ಸಮಸ್ಯೆ ಕುರಿತು ಮುಂದಿನ ದಿನಗಳಲ್ಲಿ ನಮ್ಮ ಪಕ್ಷದ ವತಿಯಿಂದ ದೊಡ್ಡ ಮಟ್ಟದ ಹೋರಾಟ ಮಾಡಲಾಗುವುದು. ಚುನಾವಣೆ ಮುಂದಿಟ್ಟುಕೊಂಡು ಜಾತಿಗೊಂದು ನಿಗಮ ಮಂಡಳಿ ಮಾಡಿ, ಜಾತಿ ಒಡೆಯುವ ಕೆಲಸ ಬಿಜೆಪಿ ಸರಕಾರ ಮಾಡುತ್ತಿದ್ದೆ ಎಂದು ಹೇಳಿದರು.
ವರದಿ-ವೀರೇಶ್ ಎಕ್ಸ್ ಪ್ರೆಸ್ ಟಿವಿ ಲಿಂಗಸೂಗೂರು