ಮಳವಳ್ಳಿ: ಅಖಿಲ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಅಖಿಲಭಾರತ ಮುಷ್ಕರದ ಅಂಗವಾಗಿ ನೂರಾರು ಅಂಗನವಾಡಿ ಕಾರ್ಯಕರ್ತರು ಮಳವಳ್ಳಿ ಪಟ್ಟಣದ ಸ್ತ್ರೀ ಶಕ್ತಿ ಭವನ ಮುಂದೆ ಪ್ರತಿಭಟನೆ ನಡೆಸಿದರು. ಅಖಿಲ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಲತಾ ನೇತೃತ್ವದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ದ ಘೋಷಣೆ ಕೂಗಿದರು.ಇನ್ನೂ ಸಂಘದ ಅಧ್ಯಕ್ಷೆ ಲತಾ ಮಾತನಾಡಿ, 2020 ನೂತನ ಶಿಕ್ಷಣ ನೀತಿಯಿಂದ ಅಂಗನವಾಡಿ ಕೇಂದ್ರಗಳನ್ನು ರಕ್ಷಿಸಬೇಕು, ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣ ಕಡ್ಡಾಯಗೊಳಿಸಿ ಹೆಚ್ಚುವರಿ ಕೆಲಸ ನಿರ್ಬಂಧಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಲತಾ, ಶಿವಮ್ಮ, ನಾಗಮ್ಮ, ವಿಜಯಾ ಸೇರಿದಂತೆ ನೂರಾರು ಅಂಗನವಾಡಿ ಕಾರ್ಯಕರ್ತರು ಇದ್ದರು.
ವರದಿ-ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ