ಸಿಂಧನೂರು:ಸಿಂಧನೂರು ನಗರದಲ್ಲಿ ಮುಷ್ಕರ ಹಿನ್ನೆಲೆ ಪ್ರಯಾಣಿಕರಿಗೆ ಬಿಸಿ ತಟ್ಟಿದೆ. ನಗರದಲ್ಲಿ ಕಾರ್ಮಿಕರು ಬೆಳಿಗ್ಗೆ 5 ಗಂಟೆಯಿಂದಲೇ ಮುಷ್ಕರಕ್ಕೆ ಸಹಕರಿಸುವಂತೆ ಎಲ್ಲಡೆ ಕೇಳಿಕೊಳ್ಳುತ್ತಿದ್ದು. ಸಾರಿಗೆ ಬಸ್ಸುಗಳನ್ನು ಸದ್ಯದ ಮಟ್ಟಿಗೆ ನಿಲ್ಲಿಸಲಾಗಿದೆ. ಹೀಗಾಗಿ ದೂರದ ಊರುಗಳಿಗೆ ತೆರಳಲು ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಪರದಾಡುವಂತಾಗಿ. ಖಾಸಗಿ ವಾಹನಗಳಿಗಾಗಿ ರಸ್ತೆಯಲ್ಲಿ ನಿಂತು ಕಾಯುತ್ತಿದ್ದಾರೆ. ಆದರೆ ಇದನ್ನೆ ಬಂಡವಾಳ ಮಾಡಿಕೊಂಡ ಖಾಸಗಿ ವಾಹನದವರು ದುಪ್ಪಟ್ಟು ಬೆಲೆ ಹೇಳಿ ಪ್ರಯಾಣಿಕರಿಂದ ಸುಲಿಗೆ ಮಾಡುತ್ತಿದ್ದಾರೆ.
ವರದಿ-ಸೈಯದ್ ಬಂಧೇನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು