ಚಿಲ್ಲರೆ ಹಣಕ್ಕಾಗಿ ಕೆಎಸ್ಆರ್ಟಿಸಿ ಕಂಡಕ್ಟರ್ ಮತ್ತು ಪ್ರಯಾಣಿಕನ ನಡುವೆ ಮಾರಾಮರಿ ನಡೆದಿರುವ ಘಟನೆ ಕೋಲಾರ ಜಿಲ್ಲೆಯ ಮುಳುಬಾಗಿಲು ಪಟ್ಟಣದ ಹಳೇ ಕೋರ್ಟ್ ಸರ್ಕಲ್ ಬಳಿ ನಡೆದಿದೆ. ಟಿಕೆಟ್ ಹಿಂದೆ ಐದು ರೂಪಾಯಿ ಚಿಲ್ಲರೆ ಬರೆದುಕೊಟ್ಟಿದ್ದ ಕಂಡಕ್ಟರ್, ಐದು ರೂಪಾಯಿ ಚಿಲ್ಲರೆ ಇಲ್ಲ ಎಂದ ವಿಚಾರಕ್ಕೆ ಪ್ರಯಾಣಿಕ ಹಾಗೂ ಕಂಡಕ್ಟರ್ ನಡುವೆ ಮಾತಿನ ಚಕಮಕಿ ಆಗಿ ಮಾರಾಮರಿ ನಡೆದಿದೆ. ಇನ್ನೂ ನಡು ರಸ್ತೆಯಲ್ಲೇ ಇಬ್ಬರು ಹೊಡೆದಾಡಿದ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದ್ದು, ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು