ಹುಬ್ಬಳ್ಳಿ- ಸ್ವಾತಿ ಅಂಬರೀಶ್ ನಿರ್ಮಾಣದ ಕಾದಂಬರಿ ಆಧಾರಿತ ದೇವದಾಸಿಯರು ಕನ್ನಡ ಚಲನಚಿತ್ರದ ಚಿತ್ರೀಕರಣ ಪೂರ್ಣವಾಗಿದ್ದು, ಮುಂದಿನ ತಿಂಗಳು ರಾಜ್ಯಾದ್ಯಂತ ಚಿತ್ರ ಬಿಡುಗಡೆಯಾಗುತ್ತಿದೆ ಎಂದು ಚಿತ್ರದ ನಿರ್ದೇಶಕರಾದ ಸ್ವಾತಿ ಅಂಬಿರೀಶ್ ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಕನ್ನಡ ಚಿತ್ರರಂಗದಲ್ಲೆ ವಿನೂತನವಾಗಿ ಪ್ರಯತ್ನ ಜೊತೆಗೆ ಸಿನಿಮಾ ಮೂಡಿ ಬಂದಿದ್ದು, ದೇವದಾಸಿಯರ ಕಥೆಯನ್ನೇ ಹೈಲೈಟ್ ಮಾಡಿದ್ದು, ಇನ್ನೂ ಈ ಚಿತ್ರದಲ್ಲಿ ನಾಯಕಿಯಾಗಿ ಸಂಜನಾ ನಾಯ್ಡು ನಟಿಸಿದ್ದಾರೆ. ಪವನಕುಮಾರ ಛಾಯಾಗ್ರಹಣ ಮಾಡಿದ್ದು, ಸತೀಶ್ ಆರ್ಯನ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಇನ್ನೂ ಚಿತ್ರದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಬಗ್ಗೆ ಹಾಗೂ ಇನ್ನಿತರ ಸಮಸ್ಯೆಗಳನ್ನು ಎತ್ತಿ ತೋರಿಸುವುದು ಚಿತ್ರದಲ್ಲಿ ಬಿಂಬಿಸಲಾಗಿದ್ದು ಚಿತ್ರದಲ್ಲಿ ಮೂರು ಹಾಡುಗಳಿದ್ದು ಉತ್ತರ ಕರ್ನಾಟಕದ ಭಾಗದಲ್ಲಿ ಚಿತ್ರೀಕರಣ ಮಾಡಲಾಗಿದೆ ಎಂದರು.
ವರದಿ-ರಾಜು ಮುದ್ಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ