ಲಿಂಗಸೂಗೂರು

ಹಟ್ಟಿ ಚಿನ್ನದ ಗಣಿ ಅಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಬಿಜೆಪಿ ಶಾಸಕ ‘ಮಾನಪ್ಪ ಡಿ. ವಜ್ಜಲ್’..!

Published

on

ಲಿಂಗಸೂಗೂರು: ಲಿಂಗಸೂಗೂರು ಬಿಜೆಪಿ ಕಾರ್ಯಲಯದ ಸಭೆಯಲ್ಲಿ ಮಾತನಾಡಿದ ಬಿಜೆಪಿ ಶಾಸಕ ಡಿ. ಮಾನಪ್ಪ ವಜ್ಜಲ್ ನಾನು 2 ಬಾರಿ ಶಾಸಕನಾಗಿ ಕೆಲಸ ಮಾಡ್ಡಿದ್ದರಿಂದ ನನ್ನನ್ನು ಗುರುತಿಸಿ ಅಧ್ಯಕ್ಷನನ್ನಾಗಿ ಮಾಡಿದ್ದಕ್ಕೆ ಕಾರ್ಯಕರ್ತರಿಗೂ ನನಗೂ ತುಂಬಾ ಸಂತೋಷವಾಗಿದೆ. ನನ್ನ ಕ್ಷೇತ್ರಕ್ಕೆ ಸರ್ಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ನಾನು ಸದಾ ಸಿದ್ಧನಾಗಿದ್ದೇನೆ. ಡಿ.2 ನೇ ತಾರೀಖಿಗೆ ನಡೆಯುವ ಸಭೆಯಲ್ಲಿ ಕಾರ್ಮಿಕರ ಸಮಸ್ಯೆಯ ಬಗ್ಗೆ ಚರ್ಚಿಸಲಾಗುವುದು. ಜೊತೆಗೆ ಮುಂಬಾರುವ ಗ್ರಾ.ಪಂ.ಚುನಾವಣೆಯಲ್ಲಿ 80% ಬಿಜೆಪಿ ಗೆಲ್ಲಲಿದೆ.ಇನ್ನೂ ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತರಿಗೆ, ಬಡವರಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ, ಇದೀಗ ಮತ್ತೆ ನನ್ನನ್ನು ಅಧ್ಯಕ್ಷನಾಗಿ ಮಾಡಿದ್ದಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರವರಿಗೆ ಹಾಗೂ ರಾಜ್ಯಧ್ಯಾಕ್ಷಕರಿಗೆ ನನ್ನ ಅಭಿನಂದನೆಗಳು ಎಂದು ಮಾನಪ್ಪ ವಜ್ವಲ್ ಬಿಜೆಪಿ ಕಾರ್ಯಾಲಯದ ಸಭೆಯಲ್ಲಿ ತಿಳಿಸಿದರು.

ವರದಿ- ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ಲಿಂಗಸೂಗೂರು

Click to comment

Trending

Exit mobile version