Uncategorized

ಜಯ ಕರ್ನಾಟಕ ರತ್ನ ಪ್ರಶಸ್ತಿಗೆ ನರಸಿಂಹ ನಾಯಕ ಆಯ್ಕೆ..!

Published

on

ಶಹಾಪುರ : ತಾಲ್ಲೂಕಿನ ಖಾನಾಪುರ ಗ್ರಾಮದ ಎಸ್. ಬಿ.ಐ.ಬ್ಯಾಂಕಿನ ಉದ್ಯೋಗಿ ಹಾಗೂ ಸಮಾಜ ಸೇವಕರಾದ ನರಸಿಂಹ ನಾಯಕ್ ಅವರಿಗೆ ಜೇವರ್ಗಿ ತಾಲ್ಲೂಕಿನ ಜಯ ಕರ್ನಾಟಕ ಸಂಘಟನೆ ವತಿಯಿಂದ ಕೊಡಮಾಡುವ 2020 ನೇ ಸಾಲಿನ ಜಯಕರ್ನಾಟಕ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾದ ಸುಧೀಂದ್ರ ಕುಮಾರ್ ಇಜೇರಿ ತಿಳಿಸಿದ್ದಾರೆ. ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮುತ್ತಪ್ಪ ರೈ ಸ್ಮರಣಾರ್ಥವಾಗಿ ಹಮ್ಮಿಕೊಂಡಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ತಾಲ್ಲೂಕು ಘಟಕದ ಅಧ್ಯಕ್ಷರಾದ ಸುಧೀಂದ್ರ ಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತವಾಗಿ ಡಿಸೆಂಬರ್ 3 ರಂದು ಜೇವರ್ಗಿ ತಾಲೂಕಿನ ಸೊನ್ನ ಗ್ರಾಮದ ಶ್ರೀ ಶಿವಾನಂದ ಶಿವಯೋಗಿ ಕಲ್ಯಾಣ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಆರ್ಥಿಕವಾಗಿ,ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಸೇವೆ ಸಲ್ಲಿಸುತ್ತಾ ಬಂದಿರುವ ನರಸಿಂಹ ನಾಯಕ ಅವರು ಮೂಲತಃ ರಾಯಚೂರು ಜಿಲ್ಲೆಯವರಾಗಿದ್ದು ಅವರಿಗೆ ಈ ಬಾರಿ ಜಯಕರ್ನಾಟಕ ರತ್ನ ಪ್ರಶಸ್ತಿ ಲಭಿಸಿರುವುದರಿಂದ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಸವರಾಜ ಸಿನ್ನೂರ,ವೀರಭದ್ರಯ್ಯ ಅಯ್ಯಾಳ,ಸೂಗುರೇಶ ಗಣಾಚಾರಿಮಠ,ಶಿವಕುಮಾರ ಜಾಯಿ,ಚಂದ್ರಶೇಖರ್ ಬಾನಾಳ ಮಲ್ಕಪ್ಪ ಹೇರುಂಡಿ ಹರ್ಷ ವ್ಯಕ್ತಪಡಿಸಿದ್ದಾರೆ.

ವರದಿ- ಬಸವರಾಜ ಸಿನ್ನೂರ ಎಕ್ಸ್ ಪ್ರೆಸ್ ಟಿವಿ ಶಹಾಪುರ.

Click to comment

Trending

Exit mobile version