ಶಹಾಪುರ: ಶಹಾಪುರ ತಾಲ್ಲೂಕಿನ ಹೊಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಜೂನ್ ಹಾಗೂ ಜುಲೈ ತಿಂಗಳಿನ ಬಿಸಿಯೂಟದ ದವಸಧಾನ್ಯಗಳು ಎಸ್ಡಿಎಂಸಿ ಅಧ್ಯಕ್ಷರಾದ ಗುರುಲಿಂಗಪ್ಪ ಅಂಗಡಿ ವಿತರಿಸಿದರು.ದವಸ ಧಾನ್ಯಗಳ ವಿತರಣೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ವಿತರಿಸಲಾಯಿತು. ಜತೆಗೆ ಮಹಾಮಾರಿ ಕರೋನ ವೈರಸ್ ಬಗ್ಗೆ ಜಾಗೃತಿ ಮೂಡಿಸಿ ತಿಳಿ ಪಡಿಸಲಾಯಿತು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳಾದ ಚಿದಾನಂದ ಹಿರೇಮಠ ಮತ್ತು ಸಹ ಶಿಕ್ಷಕರಾದ ಪರಸಪ್ಪ ಅಜಗಪನವರ ಹಾಗೂ ಇತರರು ಉಪಸ್ಥಿತರಿದ್ದರು.
ವರದಿ- ಬಸವರಾಜ್ ಸಿನ್ನೂರ ಎಕ್ಸ್ ಪ್ರೆಸ್ ಟಿವಿ ಶಹಾಪುರ