ಕೋಲಾರ

ನಾಡ ಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣ..!

Published

on

ಕೋಲಾರ: ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಡಿವಿಜೆ ವೃತ್ತದಲ್ಲಿ ನಾಡ ಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣ ಕಾರ್ಯಕ್ಕೆ ಮುಳಬಾಗಿಲು ತಾಲೂಕಿನ ಒಕ್ಕಲಿಗರ ಮುಖಂಡರು ಗುದ್ದಲಿ ಪೂಜೆಯನ್ನು ನೆರವೇರಿಸಿದ್ರು. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮುಳಬಾಗಿಲು ಶಾಸಕ ಹೆಚ.ನಾಗೇಶ್ ಸ್ಥಳ ಪರಿಶೀಲನೆ ನಡೆಸಿದ್ರು. ಇನ್ನೂ ನಾಡ ಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಣಕ್ಕೆ ಕೆಂಪೇಗೌಡರ ರಥ ಮಾಡಿ ತಾಲೂಕಿನಾದ್ಯಾಂತ ರಥ ಸಂಚರಿಸಿ ದೇಣಿಗೆ ಸಂಗ್ರಹಿಸಿದ್ದು, ನಾಡ ಪ್ರಭು ಕೆಂಪೇಗೌಡ ಕೇವಲ ಒಂದು ಜಾತಿಗೆ ಸೀಮಿತವಲ್ಲ ಅವರು ಜಾತ್ಯಾತೀತ ನಾಯಕರು ಆದ್ದರಿಂದ ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಕೆಂಪೇಗೌಡರ ರಥ ಸಂಚರಿಸಿ ಎಲ್ಲಾ ಜನರಿಂದ ದೇಣಿಗೆ ಸಂಗ್ರಹಿಸಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡುವುದಾಗಿ ಒಕ್ಕಲಿಗ ಮುಖಂಡರು ತಿಳಿಸಿದ್ರು. ಇನ್ನು ಕೆಂಪೇಗೌಡರ ಮುಂದಿನ ಹುಟ್ಟು ಹಬ್ಬಕ್ಕೆ ಪ್ರತಿಮೆಯನ್ನು ನಿರ್ಮಾಣ ಮಾಡುವುದಾಗಿ ತಳಿಸಿದ್ರು. ಅಲ್ಲದೇ ಯಾವ ರೀತಿ ಕೆಂಪೇಗೌಡರ ಪ್ರತಿಮೆಯನ್ನು ನಿರ್ಮಾಣ ಮಾಡಬೇಕು ಎಂಬುದರ ಕುರಿತು ಮುಂದಿನ ದಿನಗಳಲ್ಲಿ ಎಲ್ಲಾ ತಾಲೂಕಿನ ಜನರ ಹಾಗೂ ಮುಖಂಡರ ಸಭೆ ಕರೆದು ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ರು.

ವರದಿ-ವಿ.ರಾಮಕೃಷ್ಣ ಎಕ್ಸ್ ಪ್ರೆಸ್ ಟಿವಿ ಕೋಲಾರ

Click to comment

Trending

Exit mobile version