ಚಿಕ್ಕಬಳ್ಳಾಪುರ

ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಲೆಗೈದ ಪತಿ..!

Published

on

ಚಿಕ್ಕಬಳ್ಳಾಪುರ: ಕುಡಿದ ಅಮಲಿನಲ್ಲಿದ್ದ ಪಾಪಿ ಪತಿಯೊಬ್ಬ ಹೆಂಡತಿಯನ್ನು ಕೊಲೆ ಮಾಡಿ ಪರಾರಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮಲಾಪುರ ಗ್ರಾಮದಲ್ಲಿ ನಡೆದಿದೆ. ಮಮತಾ ಕೊಲೆಯಾದ ಮಹಿಳೆ. ಇನ್ನು ಈಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. 5 ವರ್ಷಗಳ ಹಿಂದೆ ಮಮತಾ ಶಿವಕುಮಾರ್ ನನ್ನು ಮದುವೆಯಾಗಿದ್ದಳು, ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಕೆಲಸ ಮಾಡದೇ ಕುಡಿತದ ದಾಸನಾಗಿದ್ದ ಶಿವಕುಮಾರ್ ಪ್ರತಿ ದಿನ ಹೆಂಡತಿಗೆ ಕುಡಿದು ಕಿರುಕುಳ ನೀಡುತ್ತಿದ್ದ. ನಿನ್ನೆ ರಾತ್ರಿ ಇಬ್ಬರ ನಡುವೆ ಜಗಳವಾಗಿದ್ದು, ಎಲ್ಲರೂ ಮಲಗಿದ್ದ ಸಮಯದಲ್ಲಿ ಮಮತಾಳ ಕುತ್ತಿಗೆಗೆ ಹಗ್ಗದಿಂದ ಬಿಗಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ್ದಾರೆ.

ವರದಿ-ಶ್ರೀನಿವಾಸ್ ಎನ್ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ

Click to comment

Trending

Exit mobile version