ಚಿಕ್ಕಬಳ್ಳಾಪುರ: ಜೆಡಿಎಸ್ ಪಕ್ಷದಿಂದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜೆಡಿಎಸ್ನ ಚಿಕ್ಕಬಳ್ಳಾಪುರ ಯುವ ಅಧ್ಯಕ್ಷ ರವಿಕುಮಾರ್ ಮಾತನಾಡಿ ಚುನಾವಣೆಗೆ ಸಂಬಂಧಪಟ್ಟಂತೆ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ದೇವೇಗೌಡರನ್ನ ಭೇಟಿ ಮಾಡಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಪಟ್ಟಂತೆ ಚರ್ಚೆಯನ್ನು ನಡೆಸಿದೆವು.ಆಗ ಕುಮಾರಸ್ವಾಮಿಯವರು ನಮ್ಮ ಎಲ್ಲ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆಯನ್ನು ನಡೆಸಲು ಹೇಳಿದ್ದರು.ಆದಕಾರಣ ಪಕ್ಷದ ಎಲ್ಲ ಕಾರ್ಯಕರ್ತರನ್ನು ಬರಮಾಡಿಕೊಂಡು ಪೂರ್ವಭಾವಿ ಸಭೆ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆಯನ್ನು ನಡೆಸಿದ್ದೇವೆ ಎಂದರು.
ವರದಿ-ಶ್ರೀನಿವಾಸ್ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ