ಬಾಗಲಕೋಟೆ: ಸಾರಿಗೆ ನೌಕರರ ಮುಷ್ಕರ ಸಂಬಂಧ ಸಾರಿಗೆ ಸಚಿವ ಲಕ್ಷ್ಮಣ ಸವದಿಗೆ ಕರೆ ಮಾಡಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಾಯ್ಯ ,ಕೆಎಸ್ ಆರ್ ಟಿಸಿ ನೌಕರರನ್ನು ಕರೆದು ಸಮಸ್ಯೆ ಇತ್ಯರ್ಥ ಪಡಿಸುವಂತೆ ಸೂಚನೆ ನೀಡಿದ್ದಾರೆ. ಬಾದಾಮಿಯ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಮಧ್ಯೆ ಲಕ್ಷ್ಮಣ ಸವದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕರೆ ಮಾಡಿ ಮಾತನಾಡಿದರು.“ಕೆಎಸ್ ಆರ್ ಟಿಸಿ ನೌಕರರನ್ನು ಕರೆದು ಇತ್ಯರ್ಥ ಮಾಡಪ್ಪ.ಜನಗಳಿಗೆ ತೊಂದ್ರೆಯಾಗುತ್ತೆ. ಕೊನೆಗೆ ನಿನ್ನನ್ನೇ ಬೈತಾರೆ,” ಎಂದು ಸಲಹೆ ನೀಡಿದ ಸಿದ್ದರಾಮಯ್ಯ, “ಸವದಿ ನಿನ್ನ ಕಷ್ಟ ನನಗೆ ಗೊತ್ತಿದೆ. ಕುಳಿತು ಮಾತನಾಡಿ, ಮುಷ್ಕರ ಕೈಬಿಡುವಂತೆ ಮಾಡಿ,” ಎಂದು ಸೂಚಿಸಿದರು. ಇಂದೇ ಫೋನ್ ಮಾಡಿ ಕರೆದು ಕೂತು ಮಾತನಾಡುವಂತೆ ಹೇಳುತ್ತೇನೆ. ನೀವು ಮುಷ್ಕರ ಮಾಡಿ ಸರಕಾರಕ್ಕೆ ಬಿಸಿ ಮುಟ್ಟಿಸಿದ್ದೀರಿ. ಈ ಮುಷ್ಕರ ಬಹಳ ದಿನ ಸಾಗದಿರಲಿ.ಇದರಿಂದ ಜನರಿಗೆ ತೊಂದರೆಯಾಗುತ್ತದೆ ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.
ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬಾಗಲಕೋಟೆ