ಕನ್ನಡ ಚಿತ್ರರಂಗದಲ್ಲಿ ದಶಕಗಳಿಂದ ಚಿತ್ರ ನಿರ್ದೇಶನ, ನಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಂತಹ ಖ್ಯಾತ ನಿರ್ದೇಶಕ ನಟ ಬೂದೂಳ್ ಕೃಷ್ಣಮೂರ್ತಿ ಇಂದು ಬೆಳಗ್ಗೆ 7 ಗಂಟೆಯ ಸುಮಾರಿಗೆ ಕೆಂಗೇರಿಯಲ್ಲಿರುವ ಶಿರ್ಕಿ ಅಪಾರ್ಟ್ ಮೆಂಟಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಇತ 1949ರಲ್ಲಿ ಚಿತ್ರದುರ್ಗದಲ್ಲಿ ಜನಿಸಿದ್ದರು. 1973 ರಲ್ಲಿ ಮೊದಲ ಬಾರಿಗೆ ಸಿದ್ದಲಿಂಗಯ್ಯನವರ ಬೂತಯ್ಯನ ಮಗ ಅಯ್ಯು ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡುವುದರ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ನಂತರ ಬೂದೂಳ್ ರವರು ಎರಡು ದಂಡೆಯ ಮೇಲೆ,ಒಲವಿನ ಕಾಣಿಕೆ, ಸೀತಾಂಜನೇಯ, ಶುಭಲಗ್ನ, ಲಂಚ ಸಾಮ್ರಾಜ್ಯ ಚಿತ್ರದಂತೆ ಸಾಕಷ್ಟು ಚಿತ್ರಗಳನ್ನು ನಿರ್ದೇಶನ ಮಾಡುವುದರ ಮೂಲಕ ಕನ್ನಡ ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆಯೂರಿದ್ದರು. ಇನ್ನೂ ಇವರು ನಿರ್ದೇಶನದ ಜೊತೆಗೆ ನಟನೆಯಲ್ಲೂ ಆಸಕ್ತಿ ಹೊಂದಿದ್ದರು. ಅರಿಶಿನ ಕುಂಕುಮ, ಬಲ್ ನನ್ಮಗ, ಪ್ರಜಾಶಕ್ತಿ ಚಿತ್ರಗಳಲ್ಲಿ ನಟನೆ ಕೂಡ ಮಾಡಿದ್ದು, ಸಾಕಷ್ಟು ಅಭಿಮಾನಿ ಬಳಗವನ್ನು ಕೂಡ ಹೊಂದಿದ್ದರು. ಇತ್ತೀಚೆಗೆ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು