Uncategorized

ಇಂಗ್ಲೆಂಡ್ ವಿಮಾನ ಸಂಚಾರ ಮಾಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯ..!

Published

on

ಹೊಸದಿಲ್ಲಿ: ಇಂಗ್ಲೆಂಡ್ನಲ್ಲಿ ಕೊರೊನಾ ವೈರಸ್ನ ಹೊಸ ರೂಪಾಂತರ ದಾಳಿ ಮಾಡಿದ್ದು, ಅತ್ಯಂತ ಕಟ್ಟುನಿಟ್ಟಿನ ಲಾಕ್ಡೌನ್ಗೆ ಅಲ್ಲಿನ ಸರ್ಕಾರ ಮೊರೆ ಹೋಗಿದೆ.ಈ ಮಧ್ಯೆ ಇಂಗ್ಲೆಂಡ್ಗೆ ವಿಮಾನ ಸಂಚಾರವನ್ನು ಈ ಕೂಡಲೇ ರದ್ದು ಮಾಡುವಂತೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ. ಇಂಗ್ಲೆಂಡ್ನಿಂದ ಭಾರತಕ್ಕೆ ಬರುವ ಹಾಗೂ ಭಾರತದಿಂದ ಇಂಗ್ಲೆಂಡ್ಗೆ ಹೋಗುವ ವಿಮಾನಗಳ ಸಂಚಾರದ ಮೇಲೆ ನಿರ್ಬಂಧ ಹೇರುವಂತೆ ಕೇಜ್ರಿವಾಲ್ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅರವಿಂದ್ ಕೇಜ್ರಿವಾಲ್, ಬ್ರಿಟನ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಆತಂಕ ಸೃಷ್ಟಿಸಿವೆ. ಹೀಗಾಗಿ ಈ ಕೂಡಲೇ ಇಂಗ್ಲೆಂಡ್ಗೆ ಎಲ್ಲಾ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದು ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವುದಾಗಿ ಹೇಳಿದ್ದಾರೆ.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version