ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಹೋರಾಟದಲ್ಲಿರುವ ಮನ್ನಾರ್ ಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಪ್ರಚಾರ ನಡೆಯುತ್ತಿದ್ದು. ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳಿಗೆ ಫೈಟ್ ನಡೆಯುತ್ತಿದೆ. ಮನ್ನಾರ್ ಪುರ ಗ್ರಾಮದಲ್ಲಿ ಕುಂದು ಕೊರತೆಗಳು ಹೆಚ್ಚಾಗಿದ್ದು. ಅಲ್ಲಿಯ ಸ್ಥಳೀಯ ಬಿಜೆಪಿ ಪಕ್ಷದ ಅಭ್ಯರ್ಥಿ ಅಲ್ಲಿ ಹೆಚ್ಚು ಗಮನ ಹರಿಸುತ್ತಿರುವುದು ಕಂಡು ಬಂದಿದ್ದು,ಇನ್ನೂ ಬಿಜೆಪಿ ಅಭ್ಯರ್ಥಿ ಸುದ್ದಿಗಾರರೊಂದಿಗೆ ಮಾತನಾಡಿ ಮನ್ನಾರ್ ಪುರ ಗ್ರಾಮದಲ್ಲಿ ಬಹಳಷ್ಟು ಕುಂದುಕೊರತೆಗಳು ಹೆಚ್ಚಾಗಿದ್ದು, ಅದರಲ್ಲಿ ಪ್ರಮುಖವಾಗಿ ರೋಡಿನ ಸಮಸ್ಯೆ ಹಾಗೂ ಚರಂಡಿ ಸಮಸ್ಯೆಗಳು ಹೆಚ್ಚಾಗುತ್ತಿದೆ. ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ ಸುಧಾಕರ್ ಅವರು ಗ್ರಾಮದ ಸಮಸ್ಯೆಗಳನ್ನು ನಿಭಾಯಿಸಿದ್ದು, ಇದೀಗ ಅವರ ಮಾರ್ಗದರ್ಶನದಲ್ಲಿ ನಾನು ಕೂಡ ಗ್ರಾಮದ ಪ್ರತಿಯೊಂದು ಸಮಸ್ಯೆಗಳನ್ನು ನಿವಾರಣೆ ಮಾಡಲು ಮುಂದಾಗುತ್ತೇನೆ. ಇನ್ನೂ ಗ್ರಾಮಕ್ಕೆ ಕೆಲ ಕಾಮಗಾರಿಗಳನ್ನು ತಂದುಕೊಟ್ಟು ಗ್ರಾಮಸ್ಥರು ಸಮಸ್ಯೆಗಳಿಂದ ದೂರ ಉಳಿಯುವಂತೆ ಮಾಡುತ್ತೇನೆ ಎಂದು ತಿಳಿಸಿದ್ದರು.
ವರದಿ-ಶ್ರೀನಿವಾಸ್ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ