ತಿಪಟೂರು

ಎಸ್ಪಿ ಡಾ.ವಂಶಿಕೃಷ್ಣ ನೇತೃತ್ವದಲ್ಲಿ ಪಥಸಂಚಲನ..!

Published

on

ತಿಪಟೂರು: ಗ್ರಾಮ ಪಂಚಾಯಿತಿ ಎರಡನೇ ಹಂತದ ಚುನಾವಣೆ ಡಿಸೆಂಬರ್ 27ರಂದು ನಡೆಯುತ್ತಿರುವ ಸಲುವಾಗಿ ತಾಲ್ಲೂಕಿನ ಬಿಳಿಗೆರೆ ಪಂಚಾಯಿತಿ ಹಾಗೂ ಕಿಬ್ಬನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಸ್ಪಿ ಡಾ. ವಂಶಿಕೃಷ್ಣ ನೇತೃತ್ವದಲ್ಲಿ ಕೆ ಬಿ ಕ್ರಾಸ್ ನಲ್ಲಿ ಪೊಲೀಸ್ ಪಥಸಂಚಲನ ನಡೆಸಲಾಯಿತು. ನಂತರ ಬಿಳಿಗೆರೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿ ಚುನಾವಣಾ ಕ್ರಮಗಳು,ಮತದಾರರಿಗೆ ಬೆದರಿಕೆ ಮುಖ್ಯವಾಗಿ ಆಮಿಷಗಳನ್ನು ಒಡ್ಡಬಾರದೆಂದು ಎಚ್ಚರಿಸಿದ ಅವರು ಶಾಂತಿಯುತ ಮತದಾನಕ್ಕೆ ಸಹಕರಿಸಬೇಕೆಂದು ತಿಳಿಸಿದರು. ಇನ್ನೂ ಈ ಸಂದರ್ಭದಲ್ಲಿ ತಿಪಟೂರು ಡಿವೈಎಸ್ಪಿ ಚಂದನ್ ಕುಮಾರ್ ಗ್ರಾಮಾಂತರ ವೃತ್ತದ ಸಿಪಿಐ ಜಯಲಕ್ಷ್ಮಮ್ಮ ಮತ್ತಿತರರು ಹಾಜರಿದ್ದರು.

ವರದಿ-ಸಿದ್ದೇಶ್ ಎಕ್ಸ್ ಪ್ರೆಸ್ ಟಿವಿ ತಿಪಟೂರು

Click to comment

Trending

Exit mobile version