ಮೊಳಕಾಲ್ಮುರು ತಾಲ್ಲೂಕಿನ ಬಿಜಿಕೆರೆ ಹೊಸೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ,ಭೀಕರ ಅಪಘಾತ ಸಂಭವಿಸಿದೆ. ಗ್ರಾಮ ಪಂಚಾಯಿತಿ ಚುನಾವಣೆ ಮುಗಿಸಿ ಕೆಲಸ ಆರಿಸಿ ಬೆಂಗಳೂರಿನತ್ತ ಹೊರಟಿದ್ದ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಐವರು ಕೂಲಿ ಕಾರ್ಮಿಕರು ಭಾನುವಾರ ನಸುಕಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಕ್ರೂಸರ್ ಹಾಗೂ ಸಿಂಧನೂರು ಕಡೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ 17 ಜನರಿಗೆ ಗಂಭೀರ ಗಾಯಗಳಾಗಿದೆ. ದೇವದುರ್ಗ ತಾಲ್ಲೂಕಿನ ಹೊಸೂರು ಸಿದ್ಧಾಪುರದ 40 ವರ್ಷದ ಶಿವಣ್ಣ, ಹಾಗೂ ಅವರ ಪತ್ನಿ 38 ವರ್ಷದ ರತ್ನಮ್ಮ, ಹಾಗೂ ಕ್ರೂಸರ್ ಚಾಲಕ ಕಣಿಗಲೆ ಗ್ರಾಮದ 19 ವರ್ಷದ ಮಹೇಶ್, 15 ವರ್ಷದ ಸೋಮನಮರಡಿ ದುರುಗಪ್ಪ, ಗಾಣದಾಳು ಗ್ರಾಮದ 55 ವರ್ಷದ ಅಮರೇಶ ಮೃತ ದುರ್ದೈವಿಗಳಾಗಿದ್ದಾರೆ. ಇನ್ನುಳಿದ 17 ಜನರಿಗೆ ಗಾಯಗಳಾಗಿದ್ದು, ಹತ್ತಿರದ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ಸೇರಿಸಲಾಗಿದೆ. ಇನ್ನೂ ವಿಷಯ ತಿಳೀಯುತ್ತಿದ್ದಂತೆ ಸ್ಥಳಕ್ಕೆ ಎಸ್ಪಿ ರಾಧಿಕಾ, ಹೆಚ್ಚುವರಿ ಪೊಲೀಸ್ ಅಧಿಕಾರಿ ನಂದಗಾವಿ, ಡಿವೈಎಸ್ ಪಿ ಶ್ರೀಧರ್ ,ಸಿಪಿಐ ಉಮೇಶ್ ನಾಯಕ್, ಪಿಎಸೈ ಬಸವರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವರದಿ-ಪಿ ಎಂ ಗಂಗಾಧರ ಎಕ್ಸ್ ಪ್ರೆಸ್ ಟಿವಿ ಮೊಳಕಾಲ್ಮುರು