ಚಿಕ್ಕಬಳ್ಳಾಪುರ: ನಾಯಿಗಳ ದಾಳಿಗೆ ಏಳು ಕುರಿಗಳು ಸಾವನ್ನಪ್ಪಿದ್ದು,ಇಪ್ಪತ್ತಕ್ಕೂ ಹೆಚ್ಚು ಕುರಿಗಳು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಊಲವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾರಾಯಣಪ್ಪ ಎಂಬುವರು ತಮ್ಮ ಮನೆ ಸಮೀಪದಲ್ಲಿರುವ ತೋಟದಲ್ಲಿ ಸುಮಾರು 60 ಕುರಿಗಳನ್ನು ಸಾಕುತ್ತಿದ್ದರು. ಇಂದು ಬೆಳಗ್ಗೆ ಏಕಾಏಕಿ ಬೀದಿ ನಾಯಿಗಳು ದಾಳಿ ನಡೆಸಿದ್ದು 7 ಕುರಿಗಳು ಸಾವನ್ನಪ್ಪಿದ್ದು 20 ಕ್ಕೂ ಹೆಚ್ಚು ಕುರಿಗಳು ಗಾಯಗೊಂಡಿವೆ. ಈ ಘಟನೆಯಲ್ಲಿ ಕೃಷಿಕ ನಾರಾಯಣಪ್ಪನವರಿಗೆ ಐವತ್ತು ಸಾವಿರ ನಷ್ಟವುಂಟಾಗಿದೆ. ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಹಲವಾರು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಲಿಲ್ಲ. ಅಧಿಕಾರಿಗಳ ನಿರ್ಲಕ್ಷದಿಂದಲೇ ಇಂದು ಈ ಘಟನೆ ಸಂಭವಿಸಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ನಾರಾಯಣಪ್ಪನವರಿಗೆ ಪರಿಹಾರ ಕೊಡಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವರದಿ- ಶ್ರೀನಿವಾಸ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ