ಲಿಂಗಸೂಗೂರು

ಕ್ಷುಲ್ಲಕ ಕಾರಣಕ್ಕೆ ಜಗಳ ಕೊಲೆಯಲ್ಲಿ ಅಂತ್ಯ..!

Published

on

ಲಿಂಗಸಗೂರು: ಕುಡಿಯುವ ನೀರಿಗೆ ಸಂಬಂಧಿಸಿದಂತೆ ಎರಡು ಕುಟುಂಬಸ್ಥರ ಮಧ್ಯೆ ನಡೆದ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ವೆಂಕಟರಾಯ ಪೇಟೆಯಲ್ಲಿ ನಡೆದಿದೆ. 36 ವರ್ಷದ ನೇತ್ರಾವತಿ ಎಂಬುವರು ಹತ್ಯಗೀಡಾದ ಮಹಿಳೆ. ಮನೆ ಬಳಿಯಿದ್ದ ನೆಲ್ಲಿಯಲ್ಲಿ ಕುಡಿಯುವ ನೀರಿನ ಕ್ಷುಲ್ಲಕ ವಿಷಯಕ್ಕೆ ಎರಡು ಕುಟುಂಬಸ್ಥರ ಮಧ್ಯೆ ವಾಗ್ವಾದ ನಡೆದಿದೆ.ಜಗಳ ತಾರಕಕ್ಕೇರಿ ಚಾಕೂವಿನಿಂದ ಇರಿದು ಮಹಿಳೆಯನ್ನು ಕೊಲೆ ಮಾಡಲಾಗಿದೆ. ಇನ್ನೂ ಮೃತ ಮಹಿಳೆಯ ಪತಿಯ ಸೋದರನ ಮಗ ಶಿವರಾಜ (25) ಎಂಬಾತ ಕೊಲೆ ಮಾಡಿದ ಆರೋಪಿ. ಮುದಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನ ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

ವರದಿ- ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ಲಿಂಗಸೂಗೂರು.

Click to comment

Trending

Exit mobile version