Uncategorized

ನೂತನವಾಗಿ ಗ್ರಾಮಪಂಚಾಯಿತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಜೆಡಿಎಸ್ ನಿಂದ ಅಭಿನಂದನಾ ಕಾರ್ಯ..!

Published

on

ಪಿರಿಯಾಪಟ್ಟಣ: ಪಿರಿಯಾಪಟ್ಟಣ ತಾಲೂಕಿನ ಹರದೂರು ಗ್ರಾಮದಲ್ಲಿ ಪಂಚಾಯಿತಿಗೆ ನೂತನವಾಗಿ ಆಯ್ಕೆಯಾದ ಕೃಷ್ಣೇಗೌಡ, ಹಾಗೂ ಕಾಮಾಕ್ಷಮ್ಮ ,ವೀಣಾ,ಕಾವ್ಯ , ಆನಿವಾಳು ಗ್ರಾಮದ ನಿವೃತ್ತ ಶಿಕ್ಷಕ ನಾಗೇಗೌಡ, ಹರೀನಳ್ಳಿ ಪವಿತ್ರ ರವರನ್ನು ಹರದೂರಿನ ಜೆಡಿಎಸ್ ಕಾರ್ಯಕರ್ತರು ಅಭಿನಂದಿಸಿದರು. ಮಾಧ್ಯಮದೊಂದಿಗೆ ಮಾತನಾಡಿದ ಕೆ ಎಸ್ ಆರ್ ಟಿಸಿ ನಿವೃತ್ತ ನೌಕರ ಕೃಷ್ಣೇಗೌಡ ನನ್ನನ್ನು ಅತಿ ಹೆಚ್ಚು ಮತಗಳಿಂದ ಪಂಚಾಯಿತಿಗೆ ಆಯ್ಕೆ ಮಾಡಿದ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಸರ್ಕಾರದಿಂದ ಬರುವ ಸವಲತ್ತುಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವಂತಹ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.ಇನ್ನೂ ಈ ಕಾರ್ಯಕ್ರಮದಲ್ಲಿ ವಕೀಲ ಜವರೇಗೌಡ ಹಾಗೂ ಜೆ.ಡಿ.ಎಸ್ ಕಾರ್ಯಕರ್ತರು ಹಾಜರಿದ್ದರು.

ವರದಿ-ರಾಮೇಗೌಡ ಎಕ್ಸ್ ಪ್ರೆಸ್ ಟಿವಿ ಪಿರಿಯಾಪಟ್ಟಣ

Click to comment

Trending

Exit mobile version