ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನ ಹಾಗೂ ಬೋಲೋರಾ ವಾಹನ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಡುಂಪಲ್ಲಿ ಬಳಿ ನಡೆದಿದೆ. ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಹೋಬಳಿ ಗಡ್ಡುವಾರಿಪಲ್ಲಿಯ 33 ವರ್ಷದ ಶಿವ ಅಪಘಾತದಲ್ಲಿ ಮೃತಪಟ್ಟ ದ್ವಿಚಕ್ರ ವಾಹನ ಸವಾರ. ಶಿವ ತನ್ನ ಪತ್ನಿ ಮತ್ತು ಮಗುವಿನೊಂದಿಗೆ ಬೆಂಗಳೂರಿನಿಂದ ಚಿಂತಾಮಣಿ ಮಾರ್ಗವಾಗಿ ಬಾಗೇಪಲ್ಲಿಯ ತಮ್ಮ ಸ್ವಗ್ರಾಮ ಗಡ್ಡುವಾರಿ ಪಲ್ಲಿಗೆ ಬೈಕ್ ನಲ್ಲಿ ತೆರಳುವಾಗ ನಡುಂಪಲ್ಲಿ ಬಳಿ ಎದುರಿನಿಂದ ಬಂದ ಬೊಲೇರೋಗೆ ಬೈಕ್ ಡಿಕ್ಕಿಯಾಗಿದೆ. ಅಪಘಾತದಲ್ಲಿ ಶಿವು ಸ್ಥಳದಲ್ಲೇ ಅಸುನೀಗಿದ್ದು, ಪತ್ನಿ ಹಾಗೂ ಮಗುವಿಗೆ ಗಂಭೀರ ಗಾಯಗಳಾಗಿದೆ.ಇನ್ನೂ ಗಾಯಾಳುಗಳನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಸ್ಥಳಕ್ಜೆ ಕೆಂಚಾರ್ಲಹಳ್ಳಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವರದಿ- ಶ್ರೀನಿವಾಸ್ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ