ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿ ಬಿದನೂರು ನಗರ ಹೊರವಲಯದ ಬೈಪಾಸ್ ರಸ್ತೆಯ ದರ್ಗಾ ಸಮೀಪದ ಪಕ್ಕದಲ್ಲಿ ಶಶಿಭೂಷಣ್ ಎಂಬುವವರ ಜಮೀನಿನಲ್ಲಿ ಶವ ಪತ್ತೆಯಾಗಿತ್ತು.ಸುಮಾರು 25 ವರ್ಷದ ಯುವಕನ ಬರ್ಬರವಾಗಿ ಹತ್ಯೆಯಾಗಿದ್ದು, ಹತ್ಯೆಯಾದ ವ್ಯಕ್ತಿ ಇಮ್ರಾನ್ ಖಾನ್ ಎಂದು ಗುರುತಿಸಲಾಗಿದೆ.ಮೃತ ವ್ಯಕ್ತಿ ಪಟ್ಟಣದ ಟಿಪ್ಪು ನಗರ ನಿವಾಸಿ ಕೆಎಸ್ ಆರ್ ಟಿಸಿ ಡಿಪೋ ಬಳಿ ವೆಲ್ಡಿಂಗ್ ಶಾಪ್ ಅಂಗಡಿ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ. ಇನ್ನೂ ಇಮ್ರಾನ್ ಖಾನ್ ನ ಮರ್ಮಾಂಗ ಕೊಯ್ದು ದೇಹದ ಹಲವೆಡೆ ಚುಚ್ಚಿ ಕೊಲೆ ಮಾಡಿದ್ದು, ಕೊಲೆಗೆ ಹಳೇ ದ್ವೇಶ ಅಥವಾ ಅನೈತಿಕ ಸಂಬಂಧ ಕಾರಣವಿರ ಬಹುದೆಂಬ ಶಂಕೆ ವ್ಯಕ್ತವಾಗಿದೆ. ಇನ್ನೂ ಸ್ಥಳಕ್ಕೆ ಗೌರಿಬಿದನೂರು ಪೋಲಿಸರು ಭೇಟಿ ಪರಿಶೀಲನೆ ನಡೆಸುತ್ತಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳೀಗಾಗಿ ಬಲೆ ಬೀಸಿದ್ದಾರೆ.
ವರದಿ-ಶ್ರೀನಿವಾಸ್ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ