ಲಿಂಗಸೂಗೂರು

ಮೂರು ಮೇವಿನ ಬಣವೆಗಳು ಬೆಂಕಿಗೆ ಆಹುತಿ-ಕಂಗಲಾದ ರೈತ..!

Published

on

ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಖಾಜಾಸಾಬ, ಹಸನ್ ಸಾಬ ಮೂಲಿಮನಿ, ಎಂಬುವರ ಜಮೀನಿನಲ್ಲಿ ಜಾನುವಾರುಗಳಿಗೆ ಶೇಖರಿಸಿಟ್ಟಿದ್ದ ಮೇವಿನ ಬಣವಿಗಳಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಮೇವು ಬಂಕಿಗೆ ಆಹುತಿಯಾಗಿದೆ.ಮೇವಿನ ಬಣವಿಗೆ ಹತ್ತಿದ ಬೆಂಕಿಯನ್ನು ನಂದಿಸಲು ಅಗ್ನಿ ಶಾಮಕ ಸಿಬ್ಬಂದಿಗಳು ಹರಸಾಹಸ ಪಟ್ಟರು ಯಾವುದೇ ಪ್ರಯೋಜನವಾಗಿಲ್ಲ.ದನ- ಕರುಗಳಿಗೆ ಒಂದು ವರ್ಷಕ್ಕೆ ಆಗುವಷ್ಟು ಮೂರು ಮೇವಿನ ಬಣವಿಗಳು ಸುಟ್ಟು ಕರಕಲಾಗಿವೆ. ಘಟನೆಯಿಂದ ರೈತ ಕಂಗಾಲಾಗಿದ್ದು, ಸರ್ಕಾರದಿಂದ ಪರಿಹಾರಕ್ಕಾಗಿ ಅಂಗಲಾಚುತ್ತಿದ್ದಾರೆ.

ವರದಿ-ವೀರೇಶ್ ಅರಮನಿ ಎಕ್ಸ್ಪ್ರೆಸ್ ಟಿವಿ ಲಿಂಗಸೂಗೂರು.

Click to comment

Trending

Exit mobile version