ಇಂಡಿ: ಅನೈತಿಕ ಸಂಬಂಧದ ಹಿನ್ನೆಲೆ ಪತ್ನಿಯನ್ನು ಮತ್ತು ಆಕೆಯ ಪ್ರಿಯಕರನನ್ನು ಪತಿ ಲಕ್ಷ್ಮಮ್ ಎಂಬಾತ ಕೊಡಲಿಯಿಂದ ಕೊಚ್ಚಿ ಕೊಲೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬಂಥನಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ತೋಟದ ಮನೆಯಲ್ಲಿ ರುದ್ರಪ್ಪ ಆಲಮೇಲ ಹಾಗೂ 35 ವರ್ಷದ ಈರಮ್ಮ ಆಲಮೇಲ ಮೃತ ದುರ್ದೈವಿಗಳಾಗಿದ್ದಾರೆ.ಇನ್ನೂ ನಿನ್ನೇ ರಾತ್ರಿ ಈ ಘಟನೆ ಸಂಭವಿಸಿದ್ದು,ಆರೋಪಿ ಲಕ್ಷ್ಮಮ್ ಪರಾರಿಯಾಗಿದ್ಧಾನೆ.ಇನ್ನೂ ವಿಷಯತಿಳಿಯುತ್ತಿದ್ದಂತೆ ಸ್ಥಳಕ್ಕೆ ಇಂಡಿ ಸಿಪಿಐ.ರಾಜಶೇಖರ್ ಭೇಟಿ ನೀಡಿ ತನಿಖೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಬಲೆ ಬೀಸಿದ್ದಾರೆ.
ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಇಂಡಿ